ಕಡಬ: ಕಡಬ ತಾಲೂಕಿನ ಕೋಡಿಂಬಾಳದ ಕೊಠಾರಿ ನಿವಾಸಿ ಸ್ವಪ್ನಾ ಹಾಗೂ ಅವರ ಮೂರು ವರ್ಷದ ಮಗುವಿನ ಮೇಲೆ ನಡೆದ ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಮಾನವೀಯತೆಯ ದೃಷ್ಟಿಯಿಂದ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿ ಪರ ವಕಾಲತ್ತು ವಹಿಸಬಾರದೆಂದು ನೀತಿ ತಂಡದಿಂದ ಪುತ್ತೂರು ಬಾರ್ ಕೌನ್ಸಿಲ್ ಗೆ ಮನವಿಯನ್ನು ನೀಡಲಾಯಿತು.
ಪುತ್ತೂರು ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಅವರಿಗೆ ದಕ್ಷಿಣ ಕನ್ನಡ ನೀತಿ ತಂಡದ ಸಂಘಟನಾ ಕಾರ್ಯದರ್ಶಿ ಜೋಸ್ ತೋಮಸ್ ರವರು ಮನವಿಯನ್ನು ನೀಡಿ ಸಂತ್ರಸ್ತ ಮಹಿಳೆ ಹಾಗೂ ಮಗುವಿಗೆ ನ್ಯಾಯ ಒದಗಿಸಲು ಪುತ್ತೂರು ವಕೀಲರ ಸಂಘವು ಬೆಂಬಲ ನೀಡಬೇಕೆಂದು ವಿನಂತಿ ಮಾಡಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಹಾಗೂ ಪದಾಧಿಕಾರಿಗಳು ನ್ಯಾಯಯುತವಾಗಿ ಸ್ಪಂದಿಸುವ ಭರವಸೆಯನ್ನು ನೀಡಿದರು. ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…