ಕಡಬ: ಕಡಬ ತಾಲೂಕಿನ ಕೋಡಿಂಬಾಳದ ಕೊಠಾರಿ ನಿವಾಸಿ ಸ್ವಪ್ನಾ ಹಾಗೂ ಅವರ ಮೂರು ವರ್ಷದ ಮಗುವಿನ ಮೇಲೆ ನಡೆದ ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಮಾನವೀಯತೆಯ ದೃಷ್ಟಿಯಿಂದ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿ ಪರ ವಕಾಲತ್ತು ವಹಿಸಬಾರದೆಂದು ನೀತಿ ತಂಡದಿಂದ ಪುತ್ತೂರು ಬಾರ್ ಕೌನ್ಸಿಲ್ ಗೆ ಮನವಿಯನ್ನು ನೀಡಲಾಯಿತು.
ಪುತ್ತೂರು ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಅವರಿಗೆ ದಕ್ಷಿಣ ಕನ್ನಡ ನೀತಿ ತಂಡದ ಸಂಘಟನಾ ಕಾರ್ಯದರ್ಶಿ ಜೋಸ್ ತೋಮಸ್ ರವರು ಮನವಿಯನ್ನು ನೀಡಿ ಸಂತ್ರಸ್ತ ಮಹಿಳೆ ಹಾಗೂ ಮಗುವಿಗೆ ನ್ಯಾಯ ಒದಗಿಸಲು ಪುತ್ತೂರು ವಕೀಲರ ಸಂಘವು ಬೆಂಬಲ ನೀಡಬೇಕೆಂದು ವಿನಂತಿ ಮಾಡಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಹಾಗೂ ಪದಾಧಿಕಾರಿಗಳು ನ್ಯಾಯಯುತವಾಗಿ ಸ್ಪಂದಿಸುವ ಭರವಸೆಯನ್ನು ನೀಡಿದರು. ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…