ಕಡಬ: ಕಡಬ ತಾಲೂಕಿನ ಕೋಡಿಂಬಾಳದ ಕೊಠಾರಿ ನಿವಾಸಿ ಸ್ವಪ್ನಾ ಹಾಗೂ ಅವರ ಮೂರು ವರ್ಷದ ಮಗುವಿನ ಮೇಲೆ ನಡೆದ ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಮಾನವೀಯತೆಯ ದೃಷ್ಟಿಯಿಂದ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿ ಪರ ವಕಾಲತ್ತು ವಹಿಸಬಾರದೆಂದು ನೀತಿ ತಂಡದಿಂದ ಪುತ್ತೂರು ಬಾರ್ ಕೌನ್ಸಿಲ್ ಗೆ ಮನವಿಯನ್ನು ನೀಡಲಾಯಿತು.
ಪುತ್ತೂರು ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಅವರಿಗೆ ದಕ್ಷಿಣ ಕನ್ನಡ ನೀತಿ ತಂಡದ ಸಂಘಟನಾ ಕಾರ್ಯದರ್ಶಿ ಜೋಸ್ ತೋಮಸ್ ರವರು ಮನವಿಯನ್ನು ನೀಡಿ ಸಂತ್ರಸ್ತ ಮಹಿಳೆ ಹಾಗೂ ಮಗುವಿಗೆ ನ್ಯಾಯ ಒದಗಿಸಲು ಪುತ್ತೂರು ವಕೀಲರ ಸಂಘವು ಬೆಂಬಲ ನೀಡಬೇಕೆಂದು ವಿನಂತಿ ಮಾಡಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಹಾಗೂ ಪದಾಧಿಕಾರಿಗಳು ನ್ಯಾಯಯುತವಾಗಿ ಸ್ಪಂದಿಸುವ ಭರವಸೆಯನ್ನು ನೀಡಿದರು. ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…