ಕಡಬ: ಕಡಬ ತಾಲೂಕಿನ ಕೋಡಿಂಬಾಳದ ಕೊಠಾರಿ ನಿವಾಸಿ ಸ್ವಪ್ನಾ ಹಾಗೂ ಅವರ ಮೂರು ವರ್ಷದ ಮಗುವಿನ ಮೇಲೆ ನಡೆದ ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಮಾನವೀಯತೆಯ ದೃಷ್ಟಿಯಿಂದ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿ ಪರ ವಕಾಲತ್ತು ವಹಿಸಬಾರದೆಂದು ನೀತಿ ತಂಡದಿಂದ ಪುತ್ತೂರು ಬಾರ್ ಕೌನ್ಸಿಲ್ ಗೆ ಮನವಿಯನ್ನು ನೀಡಲಾಯಿತು.
ಪುತ್ತೂರು ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಅವರಿಗೆ ದಕ್ಷಿಣ ಕನ್ನಡ ನೀತಿ ತಂಡದ ಸಂಘಟನಾ ಕಾರ್ಯದರ್ಶಿ ಜೋಸ್ ತೋಮಸ್ ರವರು ಮನವಿಯನ್ನು ನೀಡಿ ಸಂತ್ರಸ್ತ ಮಹಿಳೆ ಹಾಗೂ ಮಗುವಿಗೆ ನ್ಯಾಯ ಒದಗಿಸಲು ಪುತ್ತೂರು ವಕೀಲರ ಸಂಘವು ಬೆಂಬಲ ನೀಡಬೇಕೆಂದು ವಿನಂತಿ ಮಾಡಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಹಾಗೂ ಪದಾಧಿಕಾರಿಗಳು ನ್ಯಾಯಯುತವಾಗಿ ಸ್ಪಂದಿಸುವ ಭರವಸೆಯನ್ನು ನೀಡಿದರು. ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…