ಕಡಬ: ಕಡಬ ತಾಲೂಕು ಕುಂತೂರು ಗ್ರಾಮದ ಎಲ್ಲಾಜೆಮೂಲೆ ಬಾಬು ನಾಯ್ಕ್ ಎಂಬವರ ಮನೆಗೆ ಭಾನುವಾರ ಸಂಜೆ ಸಿಡಿಲು ಬಡಿದು ಹಾನಿಯಾಗಿದೆ. ಭಾನುವಾರ ಸಂಜೆ ಸಿಡಿಲು ಗುಡುಗು ಸಹಿತ ಮಳೆಯಾಗಿತ್ತು. ಈ ಸಂದರ್ಭ ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ ಯಲ್ಲದೆ ವಿದ್ಯುತ್ ಪೂರೈಕೆಯ ಮೀಟರ್ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಇಚಿಲಂಪಾಡಿ ಪ್ರದೇಶದಲ್ಲೂ ಮನೆಗೆ ಹಾನಿಯಾಗಿದೆ. ಇಚಿಲಂಪಾಡಿ ನಿವಾಸಿ ಸಾಂತಪ್ಪ ಗೌಡ ಎಂಬವರ ಮನೆಗೆ ಹಾನಿಯಾಗಿದ್ದು ಕುಟ್ರುಪ್ಪಾಡಿ ಗ್ರಾಮದ ಬಾಳಪ್ಪ ಗೌಡ ಎಂಬವರ ಮನೆಗೆ ಸಿಡಿಲು ಬಡಿದಿದೆ. ಆತೂರು ಪರಿಸರದಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗುರುಳಿದ ಪರಿಣಾಮ ಕೆಲಕಾಲ ರಸ್ತೆ ತಡೆ ಉಂಟಾಗಿತ್ತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel