ಕಡಬ: ಕಡಬ ತಾಲೂಕು ಕುಂತೂರು ಗ್ರಾಮದ ಎಲ್ಲಾಜೆಮೂಲೆ ಬಾಬು ನಾಯ್ಕ್ ಎಂಬವರ ಮನೆಗೆ ಭಾನುವಾರ ಸಂಜೆ ಸಿಡಿಲು ಬಡಿದು ಹಾನಿಯಾಗಿದೆ. ಭಾನುವಾರ ಸಂಜೆ ಸಿಡಿಲು ಗುಡುಗು ಸಹಿತ ಮಳೆಯಾಗಿತ್ತು. ಈ ಸಂದರ್ಭ ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ ಯಲ್ಲದೆ ವಿದ್ಯುತ್ ಪೂರೈಕೆಯ ಮೀಟರ್ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಇಚಿಲಂಪಾಡಿ ಪ್ರದೇಶದಲ್ಲೂ ಮನೆಗೆ ಹಾನಿಯಾಗಿದೆ. ಇಚಿಲಂಪಾಡಿ ನಿವಾಸಿ ಸಾಂತಪ್ಪ ಗೌಡ ಎಂಬವರ ಮನೆಗೆ ಹಾನಿಯಾಗಿದ್ದು ಕುಟ್ರುಪ್ಪಾಡಿ ಗ್ರಾಮದ ಬಾಳಪ್ಪ ಗೌಡ ಎಂಬವರ ಮನೆಗೆ ಸಿಡಿಲು ಬಡಿದಿದೆ. ಆತೂರು ಪರಿಸರದಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗುರುಳಿದ ಪರಿಣಾಮ ಕೆಲಕಾಲ ರಸ್ತೆ ತಡೆ ಉಂಟಾಗಿತ್ತು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…