ಕಡಬ: ಕಡಬ ತಾಲೂಕು ಕುಂತೂರು ಗ್ರಾಮದ ಎಲ್ಲಾಜೆಮೂಲೆ ಬಾಬು ನಾಯ್ಕ್ ಎಂಬವರ ಮನೆಗೆ ಭಾನುವಾರ ಸಂಜೆ ಸಿಡಿಲು ಬಡಿದು ಹಾನಿಯಾಗಿದೆ. ಭಾನುವಾರ ಸಂಜೆ ಸಿಡಿಲು ಗುಡುಗು ಸಹಿತ ಮಳೆಯಾಗಿತ್ತು. ಈ ಸಂದರ್ಭ ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ ಯಲ್ಲದೆ ವಿದ್ಯುತ್ ಪೂರೈಕೆಯ ಮೀಟರ್ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಇಚಿಲಂಪಾಡಿ ಪ್ರದೇಶದಲ್ಲೂ ಮನೆಗೆ ಹಾನಿಯಾಗಿದೆ. ಇಚಿಲಂಪಾಡಿ ನಿವಾಸಿ ಸಾಂತಪ್ಪ ಗೌಡ ಎಂಬವರ ಮನೆಗೆ ಹಾನಿಯಾಗಿದ್ದು ಕುಟ್ರುಪ್ಪಾಡಿ ಗ್ರಾಮದ ಬಾಳಪ್ಪ ಗೌಡ ಎಂಬವರ ಮನೆಗೆ ಸಿಡಿಲು ಬಡಿದಿದೆ. ಆತೂರು ಪರಿಸರದಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗುರುಳಿದ ಪರಿಣಾಮ ಕೆಲಕಾಲ ರಸ್ತೆ ತಡೆ ಉಂಟಾಗಿತ್ತು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…