ಕಡಬ : ತಾಲೂಕಿನ ಕೊಯಿಲ, ಆತೂರು ಪರಿಸರದಲ್ಲಿ ಕಳೆದ ರಾತ್ರಿ, ಇಂದು ಬೆಳಿಗ್ಗೆ ಬೀಸಿದ ಭಾರಿ ಗಾಳಿಗೆ ವಿದ್ಯುತ್ ತಂತಿ ಮೇಲೆ ಮರಗಳು ಬಿದ್ದು ಹಲವು ವಿದ್ಯುತ್ ಕಂಬಗಳು ಧರಶಾಯಿಯಾಗಿದೆ.
ಆತೂರು ಸಮೀಪದ ಕೊಯಿಲ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಬಳಿ ಬೃಹತ್ ಮರ ಮುರಿದು ಬಿದ್ದಿದೆ, ಕೊಯಿಲ ಗ್ರಾಮದಲ್ಲಿ ಏಣಿತ್ತಡ್ಕ ಎಂಬಲ್ಲಿ ಮರವೊಂದು ಮುರಿದು ಬಿದ್ದಿದೆ. ಇದೇ ಗ್ರಾಮದ ತಿಮರೆಗುಡ್ಡೆ ಎಂಬಲ್ಲಿ ಮರ ಬಿದ್ದಿದೆ. ಘಟನೆಯಿಂದ ಸುಮಾರು 10 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ತಿಮರೆಗುಡ್ಡೆ ಎಂಬಲ್ಲಿ ಕಂಬ ಮುರಿದು ಬಿದ್ದ ಪರಿಣಾಮ ಇಲ್ಲಿಯ ಕೃಷ್ಣಪ್ಪ ಎಂಬುವವರ ಪಂಪು ಶೆಡ್ ಗೆ ಹಾನಿಯಾಗಿದೆ. ಸಮಸ್ಯೆ ಬಗೆಹರಿಸಲು ಮೆಸ್ಕಾಂ ಸಿಬ್ದಂದಿಗಳು ಹರ ಸಾಹಸ ಪಡುತ್ತಿದ್ದಾರೆ. ನಿರಂತರ ಸುರಿಯುವ ಮಳೆಯೊಂದಿಗೆ ಭಾರಿ ಗಾಳಿ ಬೀಸುತ್ತಿರುವುದು ಸೂಸುತ್ರವಾಗಿ ಕೆಲಸ ಮುಗಿಸಲು ಸವಾಲಾಗಿದೆ.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…