ಕಡಬ : ತಾಲೂಕಿನ ಕೊಯಿಲ, ಆತೂರು ಪರಿಸರದಲ್ಲಿ ಕಳೆದ ರಾತ್ರಿ, ಇಂದು ಬೆಳಿಗ್ಗೆ ಬೀಸಿದ ಭಾರಿ ಗಾಳಿಗೆ ವಿದ್ಯುತ್ ತಂತಿ ಮೇಲೆ ಮರಗಳು ಬಿದ್ದು ಹಲವು ವಿದ್ಯುತ್ ಕಂಬಗಳು ಧರಶಾಯಿಯಾಗಿದೆ.
ಆತೂರು ಸಮೀಪದ ಕೊಯಿಲ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಬಳಿ ಬೃಹತ್ ಮರ ಮುರಿದು ಬಿದ್ದಿದೆ, ಕೊಯಿಲ ಗ್ರಾಮದಲ್ಲಿ ಏಣಿತ್ತಡ್ಕ ಎಂಬಲ್ಲಿ ಮರವೊಂದು ಮುರಿದು ಬಿದ್ದಿದೆ. ಇದೇ ಗ್ರಾಮದ ತಿಮರೆಗುಡ್ಡೆ ಎಂಬಲ್ಲಿ ಮರ ಬಿದ್ದಿದೆ. ಘಟನೆಯಿಂದ ಸುಮಾರು 10 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ತಿಮರೆಗುಡ್ಡೆ ಎಂಬಲ್ಲಿ ಕಂಬ ಮುರಿದು ಬಿದ್ದ ಪರಿಣಾಮ ಇಲ್ಲಿಯ ಕೃಷ್ಣಪ್ಪ ಎಂಬುವವರ ಪಂಪು ಶೆಡ್ ಗೆ ಹಾನಿಯಾಗಿದೆ. ಸಮಸ್ಯೆ ಬಗೆಹರಿಸಲು ಮೆಸ್ಕಾಂ ಸಿಬ್ದಂದಿಗಳು ಹರ ಸಾಹಸ ಪಡುತ್ತಿದ್ದಾರೆ. ನಿರಂತರ ಸುರಿಯುವ ಮಳೆಯೊಂದಿಗೆ ಭಾರಿ ಗಾಳಿ ಬೀಸುತ್ತಿರುವುದು ಸೂಸುತ್ರವಾಗಿ ಕೆಲಸ ಮುಗಿಸಲು ಸವಾಲಾಗಿದೆ.
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…
ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…
ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…