ಕಡಬ : ತಾಲೂಕಿನ ಕೊಯಿಲ, ಆತೂರು ಪರಿಸರದಲ್ಲಿ ಕಳೆದ ರಾತ್ರಿ, ಇಂದು ಬೆಳಿಗ್ಗೆ ಬೀಸಿದ ಭಾರಿ ಗಾಳಿಗೆ ವಿದ್ಯುತ್ ತಂತಿ ಮೇಲೆ ಮರಗಳು ಬಿದ್ದು ಹಲವು ವಿದ್ಯುತ್ ಕಂಬಗಳು ಧರಶಾಯಿಯಾಗಿದೆ.
ಆತೂರು ಸಮೀಪದ ಕೊಯಿಲ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಬಳಿ ಬೃಹತ್ ಮರ ಮುರಿದು ಬಿದ್ದಿದೆ, ಕೊಯಿಲ ಗ್ರಾಮದಲ್ಲಿ ಏಣಿತ್ತಡ್ಕ ಎಂಬಲ್ಲಿ ಮರವೊಂದು ಮುರಿದು ಬಿದ್ದಿದೆ. ಇದೇ ಗ್ರಾಮದ ತಿಮರೆಗುಡ್ಡೆ ಎಂಬಲ್ಲಿ ಮರ ಬಿದ್ದಿದೆ. ಘಟನೆಯಿಂದ ಸುಮಾರು 10 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ತಿಮರೆಗುಡ್ಡೆ ಎಂಬಲ್ಲಿ ಕಂಬ ಮುರಿದು ಬಿದ್ದ ಪರಿಣಾಮ ಇಲ್ಲಿಯ ಕೃಷ್ಣಪ್ಪ ಎಂಬುವವರ ಪಂಪು ಶೆಡ್ ಗೆ ಹಾನಿಯಾಗಿದೆ. ಸಮಸ್ಯೆ ಬಗೆಹರಿಸಲು ಮೆಸ್ಕಾಂ ಸಿಬ್ದಂದಿಗಳು ಹರ ಸಾಹಸ ಪಡುತ್ತಿದ್ದಾರೆ. ನಿರಂತರ ಸುರಿಯುವ ಮಳೆಯೊಂದಿಗೆ ಭಾರಿ ಗಾಳಿ ಬೀಸುತ್ತಿರುವುದು ಸೂಸುತ್ರವಾಗಿ ಕೆಲಸ ಮುಗಿಸಲು ಸವಾಲಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…