ಕಡಬ : ತಾಲೂಕಿನ ಕೊಯಿಲ, ಆತೂರು ಪರಿಸರದಲ್ಲಿ ಕಳೆದ ರಾತ್ರಿ, ಇಂದು ಬೆಳಿಗ್ಗೆ ಬೀಸಿದ ಭಾರಿ ಗಾಳಿಗೆ ವಿದ್ಯುತ್ ತಂತಿ ಮೇಲೆ ಮರಗಳು ಬಿದ್ದು ಹಲವು ವಿದ್ಯುತ್ ಕಂಬಗಳು ಧರಶಾಯಿಯಾಗಿದೆ.
ಆತೂರು ಸಮೀಪದ ಕೊಯಿಲ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಬಳಿ ಬೃಹತ್ ಮರ ಮುರಿದು ಬಿದ್ದಿದೆ, ಕೊಯಿಲ ಗ್ರಾಮದಲ್ಲಿ ಏಣಿತ್ತಡ್ಕ ಎಂಬಲ್ಲಿ ಮರವೊಂದು ಮುರಿದು ಬಿದ್ದಿದೆ. ಇದೇ ಗ್ರಾಮದ ತಿಮರೆಗುಡ್ಡೆ ಎಂಬಲ್ಲಿ ಮರ ಬಿದ್ದಿದೆ. ಘಟನೆಯಿಂದ ಸುಮಾರು 10 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ತಿಮರೆಗುಡ್ಡೆ ಎಂಬಲ್ಲಿ ಕಂಬ ಮುರಿದು ಬಿದ್ದ ಪರಿಣಾಮ ಇಲ್ಲಿಯ ಕೃಷ್ಣಪ್ಪ ಎಂಬುವವರ ಪಂಪು ಶೆಡ್ ಗೆ ಹಾನಿಯಾಗಿದೆ. ಸಮಸ್ಯೆ ಬಗೆಹರಿಸಲು ಮೆಸ್ಕಾಂ ಸಿಬ್ದಂದಿಗಳು ಹರ ಸಾಹಸ ಪಡುತ್ತಿದ್ದಾರೆ. ನಿರಂತರ ಸುರಿಯುವ ಮಳೆಯೊಂದಿಗೆ ಭಾರಿ ಗಾಳಿ ಬೀಸುತ್ತಿರುವುದು ಸೂಸುತ್ರವಾಗಿ ಕೆಲಸ ಮುಗಿಸಲು ಸವಾಲಾಗಿದೆ.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…