ಕಣಿವೆ ತೂಗು ಸೇತುವೆ ದುರಸ್ತಿ ಶೀಘ್ರ ಆರಂಭ : ಶಾಸಕ ಅಪ್ಪಚ್ಚು ರಂಜನ್ ಭರವಸೆ

September 10, 2019
6:00 PM

ಮಡಿಕೇರಿ : ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಎದುರು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗು ಸೇತುವೆಯು ಈ ಬಾರಿ ಕಾವೇರಿ ನದಿಯ ಪ್ರವಾಹದಿಂದಾಗಿ ಕೊಚ್ಚಿಹೋಗಿದ್ದು, ಇದನ್ನು ಆದಷ್ಟು ಶೀಘ್ರ ಸರಿಪಡಿಸಲಾಗುವುದು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಭರವಸೆ ನೀಡಿದರು.

Advertisement
Advertisement
Advertisement
Advertisement
Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು , ಈಗಾಗಲೇ ಈ ತೂಗು ಸೇತುವೆಯ ದುರಸ್ತಿಗೆ ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗಕ್ಕೆ ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಮತ್ತೆ ಕಾವೇರಿ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಈ ಸೇತುವೆ ಕೊಡಗು ಹಾಗೂ ಪಿರಿಯಾಪಟ್ಟಣ ತಾಲೂಕಿನ ಕೆಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಅತಿ ಪ್ರಮುಖ ಸಂರ್ಪಕ ಸೇತುವೆ ಯಾಗಿದ್ದು ಮುಂದಿನ 10 ದಿನಗಳ ಒಳಗೆ ಸರಿಪಡಿಸಲಾಗುವುದು ಎಂದು ನುಡಿದರು.
ನೂರಾರು ಕಾರ್ಮಿಕರು, ಶಾಲಾ ಕಾಲೇಜು ವಿಧ್ಯಾರ್ಥಿಗಳು ಈ ಸೇತುವೆಯನ್ನು ಅವಲಂಬಿಸಿದ್ದು, ಅವರಿಗೆ ತೊಂದರೆಯಾಗದ ರೀತಿಯಲ್ಲಿ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಸಂಧರ್ಭ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಅರ್.ಮಂಜುಳಾ, ತಾಲೂಕು ಪಂಚಾಯತ್ ಸದಸ್ಯ ಗಣೇಶ್, ಇಂಜಿನಿಯರ್ ವೀರೇಂದ್ರ ಕುಮಾರ್, ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |
March 3, 2025
7:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror