Advertisement
ಸುದ್ದಿಗಳು

ಕಣಿವೆ ತೂಗು ಸೇತುವೆ ದುರಸ್ತಿ ಶೀಘ್ರ ಆರಂಭ : ಶಾಸಕ ಅಪ್ಪಚ್ಚು ರಂಜನ್ ಭರವಸೆ

Share

ಮಡಿಕೇರಿ : ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಎದುರು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗು ಸೇತುವೆಯು ಈ ಬಾರಿ ಕಾವೇರಿ ನದಿಯ ಪ್ರವಾಹದಿಂದಾಗಿ ಕೊಚ್ಚಿಹೋಗಿದ್ದು, ಇದನ್ನು ಆದಷ್ಟು ಶೀಘ್ರ ಸರಿಪಡಿಸಲಾಗುವುದು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಭರವಸೆ ನೀಡಿದರು.

Advertisement
Advertisement
Advertisement
Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು , ಈಗಾಗಲೇ ಈ ತೂಗು ಸೇತುವೆಯ ದುರಸ್ತಿಗೆ ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗಕ್ಕೆ ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಮತ್ತೆ ಕಾವೇರಿ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಈ ಸೇತುವೆ ಕೊಡಗು ಹಾಗೂ ಪಿರಿಯಾಪಟ್ಟಣ ತಾಲೂಕಿನ ಕೆಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಅತಿ ಪ್ರಮುಖ ಸಂರ್ಪಕ ಸೇತುವೆ ಯಾಗಿದ್ದು ಮುಂದಿನ 10 ದಿನಗಳ ಒಳಗೆ ಸರಿಪಡಿಸಲಾಗುವುದು ಎಂದು ನುಡಿದರು.
ನೂರಾರು ಕಾರ್ಮಿಕರು, ಶಾಲಾ ಕಾಲೇಜು ವಿಧ್ಯಾರ್ಥಿಗಳು ಈ ಸೇತುವೆಯನ್ನು ಅವಲಂಬಿಸಿದ್ದು, ಅವರಿಗೆ ತೊಂದರೆಯಾಗದ ರೀತಿಯಲ್ಲಿ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಸಂಧರ್ಭ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಅರ್.ಮಂಜುಳಾ, ತಾಲೂಕು ಪಂಚಾಯತ್ ಸದಸ್ಯ ಗಣೇಶ್, ಇಂಜಿನಿಯರ್ ವೀರೇಂದ್ರ ಕುಮಾರ್, ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

23 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago