ಮಡಿಕೇರಿ : ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಎದುರು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗು ಸೇತುವೆಯು ಈ ಬಾರಿ ಕಾವೇರಿ ನದಿಯ ಪ್ರವಾಹದಿಂದಾಗಿ ಕೊಚ್ಚಿಹೋಗಿದ್ದು, ಇದನ್ನು ಆದಷ್ಟು ಶೀಘ್ರ ಸರಿಪಡಿಸಲಾಗುವುದು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಭರವಸೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು , ಈಗಾಗಲೇ ಈ ತೂಗು ಸೇತುವೆಯ ದುರಸ್ತಿಗೆ ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗಕ್ಕೆ ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಮತ್ತೆ ಕಾವೇರಿ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಈ ಸೇತುವೆ ಕೊಡಗು ಹಾಗೂ ಪಿರಿಯಾಪಟ್ಟಣ ತಾಲೂಕಿನ ಕೆಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಅತಿ ಪ್ರಮುಖ ಸಂರ್ಪಕ ಸೇತುವೆ ಯಾಗಿದ್ದು ಮುಂದಿನ 10 ದಿನಗಳ ಒಳಗೆ ಸರಿಪಡಿಸಲಾಗುವುದು ಎಂದು ನುಡಿದರು.
ನೂರಾರು ಕಾರ್ಮಿಕರು, ಶಾಲಾ ಕಾಲೇಜು ವಿಧ್ಯಾರ್ಥಿಗಳು ಈ ಸೇತುವೆಯನ್ನು ಅವಲಂಬಿಸಿದ್ದು, ಅವರಿಗೆ ತೊಂದರೆಯಾಗದ ರೀತಿಯಲ್ಲಿ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಸಂಧರ್ಭ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಅರ್.ಮಂಜುಳಾ, ತಾಲೂಕು ಪಂಚಾಯತ್ ಸದಸ್ಯ ಗಣೇಶ್, ಇಂಜಿನಿಯರ್ ವೀರೇಂದ್ರ ಕುಮಾರ್, ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…