Advertisement
ಸುದ್ದಿಗಳು

ಕಣಿವೆ ತೂಗು ಸೇತುವೆ ದುರಸ್ತಿ ಶೀಘ್ರ ಆರಂಭ : ಶಾಸಕ ಅಪ್ಪಚ್ಚು ರಂಜನ್ ಭರವಸೆ

Share

ಮಡಿಕೇರಿ : ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಎದುರು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗು ಸೇತುವೆಯು ಈ ಬಾರಿ ಕಾವೇರಿ ನದಿಯ ಪ್ರವಾಹದಿಂದಾಗಿ ಕೊಚ್ಚಿಹೋಗಿದ್ದು, ಇದನ್ನು ಆದಷ್ಟು ಶೀಘ್ರ ಸರಿಪಡಿಸಲಾಗುವುದು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಭರವಸೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು , ಈಗಾಗಲೇ ಈ ತೂಗು ಸೇತುವೆಯ ದುರಸ್ತಿಗೆ ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗಕ್ಕೆ ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಮತ್ತೆ ಕಾವೇರಿ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಈ ಸೇತುವೆ ಕೊಡಗು ಹಾಗೂ ಪಿರಿಯಾಪಟ್ಟಣ ತಾಲೂಕಿನ ಕೆಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಅತಿ ಪ್ರಮುಖ ಸಂರ್ಪಕ ಸೇತುವೆ ಯಾಗಿದ್ದು ಮುಂದಿನ 10 ದಿನಗಳ ಒಳಗೆ ಸರಿಪಡಿಸಲಾಗುವುದು ಎಂದು ನುಡಿದರು.
ನೂರಾರು ಕಾರ್ಮಿಕರು, ಶಾಲಾ ಕಾಲೇಜು ವಿಧ್ಯಾರ್ಥಿಗಳು ಈ ಸೇತುವೆಯನ್ನು ಅವಲಂಬಿಸಿದ್ದು, ಅವರಿಗೆ ತೊಂದರೆಯಾಗದ ರೀತಿಯಲ್ಲಿ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಸಂಧರ್ಭ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಅರ್.ಮಂಜುಳಾ, ತಾಲೂಕು ಪಂಚಾಯತ್ ಸದಸ್ಯ ಗಣೇಶ್, ಇಂಜಿನಿಯರ್ ವೀರೇಂದ್ರ ಕುಮಾರ್, ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

9 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

10 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago