ಮಡಿಕೇರಿ : ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಎದುರು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗು ಸೇತುವೆಯು ಈ ಬಾರಿ ಕಾವೇರಿ ನದಿಯ ಪ್ರವಾಹದಿಂದಾಗಿ ಕೊಚ್ಚಿಹೋಗಿದ್ದು, ಇದನ್ನು ಆದಷ್ಟು ಶೀಘ್ರ ಸರಿಪಡಿಸಲಾಗುವುದು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಭರವಸೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು , ಈಗಾಗಲೇ ಈ ತೂಗು ಸೇತುವೆಯ ದುರಸ್ತಿಗೆ ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗಕ್ಕೆ ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಮತ್ತೆ ಕಾವೇರಿ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಈ ಸೇತುವೆ ಕೊಡಗು ಹಾಗೂ ಪಿರಿಯಾಪಟ್ಟಣ ತಾಲೂಕಿನ ಕೆಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಅತಿ ಪ್ರಮುಖ ಸಂರ್ಪಕ ಸೇತುವೆ ಯಾಗಿದ್ದು ಮುಂದಿನ 10 ದಿನಗಳ ಒಳಗೆ ಸರಿಪಡಿಸಲಾಗುವುದು ಎಂದು ನುಡಿದರು.
ನೂರಾರು ಕಾರ್ಮಿಕರು, ಶಾಲಾ ಕಾಲೇಜು ವಿಧ್ಯಾರ್ಥಿಗಳು ಈ ಸೇತುವೆಯನ್ನು ಅವಲಂಬಿಸಿದ್ದು, ಅವರಿಗೆ ತೊಂದರೆಯಾಗದ ರೀತಿಯಲ್ಲಿ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಸಂಧರ್ಭ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಅರ್.ಮಂಜುಳಾ, ತಾಲೂಕು ಪಂಚಾಯತ್ ಸದಸ್ಯ ಗಣೇಶ್, ಇಂಜಿನಿಯರ್ ವೀರೇಂದ್ರ ಕುಮಾರ್, ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…