Advertisement
ಯಕ್ಷಗಾನ : ಮಾತು-ಮಸೆತ

ಕತ್ತಲೆಯ ಕೋಣೆಯಲ್ಲಿದ್ದ ಅಂಧಕಾರಕ್ಕೆ ನೂರು ವರುಷ ಆಯುಸ್ಸು….

Share

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ದಂಬ’)
ಪ್ರಸಂಗ : ಸಹಸ್ರಕವಚ ಮೋಕ್ಷ

Advertisement
Advertisement

(ಸಂದರ್ಭ : ನರನಾರಾಯಣರೊಂದಿಗೆ ಹೋರಾಡಿ ಸೋತ ದಂಬನಿಗೆ ಜ್ಞಾನೋದಯ)

“.. ಅಹಂಕಾರಕ್ಕೆ ಎಷ್ಟು ಪೊದರುಗಳು. ಸಾಮಾನ್ಯ ಮೃಗಪಕ್ಷಿಗಳಿಗಿದ್ದಂತಹ ತಪೋಗುಣದ ಅಹಂಕಾರವೇ ಒಂದು ಪೊದರಾಗಿ ಪರಿಣಮಿಸುತ್ತದೆ; ಬಂಧನಕಾರಕವಾಗುತ್ತದೆ. ಸೌಂದರ್ಯವೂ ಬಂಧನಕಾರವಾಗುತ್ತದೆ. ಕ್ರೌರ್ಯವೂ ಬಂಧನಕಾರಕವಾಗುತ್ತದೆ. ರಾಜರು ಹುಲಿ, ಶಾರ್ದೂಲಾದಿಗಳನ್ನು ಬಂಧನದಲ್ಲಿ ಕಟ್ಟಿ ಹಾಕುತ್ತಾರೆ. ಕೋಗಿಲೆ, ಗಿಳಿ, ನವಿಲು.. ಇತ್ಯಾದಿ ಪ್ರಾಣಿಪಕ್ಷಿಗಳನ್ನು ಬಂಧಿಸುತ್ತಾರೆ… ನಾನು ನಾನಾಗಿ ನನ್ನ ಮೈಮೇಲೆ ಹಾಕಿಕೊಂಡ ಮುಸುಕುಗಳು ಎಷ್ಟು? ಒಂದೋ.. ಎರಡೋ… ಮೂರೋ.. ನೂರೋ… ಒಂಬೈನೂರ ತೊಂಭತ್ತೊಂಭತ್ತು. ಇದು ಕತ್ತಲೆಯ ಆವರಣಗಳು. ನಾನು ಎದ್ದು ಬಂದದ್ದೇ ವಿಚತ್ರ! ಬಹುಶಃ ನಮ್ಮದ್ದಾದ ವಿಭೂತಿಮತ್ತಾದ ಶಕ್ತಿ ವಿಶೇಷವದು.

ಆದರೆ ಒಂದು ವಿಶ್ವಾಸ. ಕತ್ತಲೆಯ ಕೋಣೆಯಲ್ಲಿದ್ದ ಅಂಧಕಾರಕ್ಕೆ ನೂರು ವರುಷ ಆಯುಸ್ಸು. ಆದರೆ ಒಂದು ದೀಪ ಉರಿಸಿದರೆ ಅದರ ನಾಶಕ್ಕೆ ನೂರು ವರುಷ ಬೇಕಾಗುವುದಿಲ್ಲ. ಈಗ ನಿಮ್ಮಲ್ಲಿ ಹೋರಾಟ ಮಾಡಿದ್ದರಿಂದ ನಿಮ್ಮಿಂದ ಕಳಚಲ್ಪಟ್ಟಂತಹ ಕವಚಗಳು ಒಂಭೈನೂರ ತೊಂಭತ್ತ ಒಂಭತ್ತು ಹೋಗಿ ಈಗ ಕೇವಲ ಒಬ್ಬ ಜೀವ ಮಾತ್ರನಿಗೆ ಮೋಕ್ಷ ಸಾಧನೆಗೆ ಬೇಕಾದ ಮಾರ್ಗವೆಂಬಂತೆ ಒಂದೇ ಕವಚ ಉಳಿದಿದೆ. ಸೂರ್ಯನಿಂದ ಏನು ಅನುಗ್ರಹ ಪಡೆದರೇನು? ಸಾವಿರಾರು ವರುಷಗಳಿಂದ ‘ಪುನರಪಿ ಜನನಂ, ಪುನರಪಿ ಮರಣಂ’ ಕಾಮ, ಕಾಂಚನ, ಕೀರ್ತಿ.. ಹೀಗೆ ಹೊದಿಕೆಯೇ ತುಂಬಿದೆ. ಇಂತಹ ಮಾಯೆಯ ಹೊದಿಕೆಯಿಂದ ಇಂದು ಹೊರಗೆ ಬಂದಿದ್ದೇನೆ. ನಿಮ್ಮ ಅನುಗ್ರಹದಿಂದ ಕೃತಾರ್ಥನಾದೆ…

ಊರ್ವಶಿ ಎಂಬವಳು ದಂಬೋದ್ಬವ ಎಂಬ ಜೀವನಿಗೆ ಕತ್ತಲೆಯನ್ನು ಬೀರಿದಂತಹ ನಾರಾಯಣನ ಮಾಯೆ. ಯಾವ ತಾಯಿ ಹೆತ್ತ ಮಗಳು ಅವಳಲ್ಲ. ಕೇವಲ ನಿಮ್ಮ ಸಂಕಲ್ಪದಿಂದ ಹುಟ್ಟಿದ್ದು. ಮೋಹದ ಅಂಧಕಾರದಲ್ಲಿ ಕೆಡಹಿ ಅವಳ ಜನ್ಮಸ್ಥಾನವಾದಂತಹ ಪಿತೃವಿನ ಸನ್ನಿಧಾನಕ್ಕೆ ನನ್ನನ್ನು ಎಳೆತಂದದ್ದು. ಪ್ರಕೃತಿಯಾಗಲೀ, ಮಾಯೆಯಾಗಲೀ ಅವಳು ಯೋಗ ಮಾಯೆಯಾಗಿ ಜೀವನನ್ನು ಆಕರ್ಷಿಸಿದಳು ಎಂತಾದರೆ, ನಿಜವಾದ ಪಿತೃ ಸ್ಥಾನಕ್ಕೆ ಪರಮಾತ್ಮನ ಸಾಕ್ಷಾತ್ಕಾರ ಮಾಡಿಸುತ್ತಾಳೆ. ನರನಾರಾಯಣರೆಂಬ ಉಭಯರಿಗೆ ಹುಟ್ಟಿದಂತಹ ಮಗಳು ಅವಳು. ಇದು ನಿಮ್ಮ ಸಂಕಲ್ಪ. ನಿಮ್ಮ ಶುದ್ಧ ಸಂಕಲ್ಪದ ಆವರಣವೇ ಅವಳ ಮೈ ಆಗಿರುತ್ತದೆಯೇ ಹೊರತು ಶುಕ್ಲ ಶೋಣಿತ ಸಮ್ಮಿಶ್ರಣವಾದುದಲ್ಲ. ಆದ ಕಾರಣ ಅವಿದ್ಯಾ ರೂಪಿಣಿಯಾಗಿ ನನ್ನನ್ನು ಎಳೆದರೂ ಕೊನೆಗೆ ವಿದ್ಯಾರೂಪಿಣಿಯಾಗಿ ನಿಮ್ಮ ದರ್ಶನವನ್ನು ಮಾಡಿದ್ದರಿಂದ ಈ ಹೊತ್ತು ಒಂದು ಬಯಕೆ ಉಳಿದಿದೆ…. ಉಳಿದೊಂದು ಕವಚಕ್ಕೆ ಮಾರ್ಗ ಸೂಚಿಸಿ…..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

8 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago