Advertisement
ಯಕ್ಷಗಾನ : ಮಾತು-ಮಸೆತ

ಕತ್ತಲೆಯ ಕೋಣೆಯಲ್ಲಿದ್ದ ಅಂಧಕಾರಕ್ಕೆ ನೂರು ವರುಷ ಆಯುಸ್ಸು….

Share

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ದಂಬ’)
ಪ್ರಸಂಗ : ಸಹಸ್ರಕವಚ ಮೋಕ್ಷ

(ಸಂದರ್ಭ : ನರನಾರಾಯಣರೊಂದಿಗೆ ಹೋರಾಡಿ ಸೋತ ದಂಬನಿಗೆ ಜ್ಞಾನೋದಯ)

“.. ಅಹಂಕಾರಕ್ಕೆ ಎಷ್ಟು ಪೊದರುಗಳು. ಸಾಮಾನ್ಯ ಮೃಗಪಕ್ಷಿಗಳಿಗಿದ್ದಂತಹ ತಪೋಗುಣದ ಅಹಂಕಾರವೇ ಒಂದು ಪೊದರಾಗಿ ಪರಿಣಮಿಸುತ್ತದೆ; ಬಂಧನಕಾರಕವಾಗುತ್ತದೆ. ಸೌಂದರ್ಯವೂ ಬಂಧನಕಾರವಾಗುತ್ತದೆ. ಕ್ರೌರ್ಯವೂ ಬಂಧನಕಾರಕವಾಗುತ್ತದೆ. ರಾಜರು ಹುಲಿ, ಶಾರ್ದೂಲಾದಿಗಳನ್ನು ಬಂಧನದಲ್ಲಿ ಕಟ್ಟಿ ಹಾಕುತ್ತಾರೆ. ಕೋಗಿಲೆ, ಗಿಳಿ, ನವಿಲು.. ಇತ್ಯಾದಿ ಪ್ರಾಣಿಪಕ್ಷಿಗಳನ್ನು ಬಂಧಿಸುತ್ತಾರೆ… ನಾನು ನಾನಾಗಿ ನನ್ನ ಮೈಮೇಲೆ ಹಾಕಿಕೊಂಡ ಮುಸುಕುಗಳು ಎಷ್ಟು? ಒಂದೋ.. ಎರಡೋ… ಮೂರೋ.. ನೂರೋ… ಒಂಬೈನೂರ ತೊಂಭತ್ತೊಂಭತ್ತು. ಇದು ಕತ್ತಲೆಯ ಆವರಣಗಳು. ನಾನು ಎದ್ದು ಬಂದದ್ದೇ ವಿಚತ್ರ! ಬಹುಶಃ ನಮ್ಮದ್ದಾದ ವಿಭೂತಿಮತ್ತಾದ ಶಕ್ತಿ ವಿಶೇಷವದು.

ಆದರೆ ಒಂದು ವಿಶ್ವಾಸ. ಕತ್ತಲೆಯ ಕೋಣೆಯಲ್ಲಿದ್ದ ಅಂಧಕಾರಕ್ಕೆ ನೂರು ವರುಷ ಆಯುಸ್ಸು. ಆದರೆ ಒಂದು ದೀಪ ಉರಿಸಿದರೆ ಅದರ ನಾಶಕ್ಕೆ ನೂರು ವರುಷ ಬೇಕಾಗುವುದಿಲ್ಲ. ಈಗ ನಿಮ್ಮಲ್ಲಿ ಹೋರಾಟ ಮಾಡಿದ್ದರಿಂದ ನಿಮ್ಮಿಂದ ಕಳಚಲ್ಪಟ್ಟಂತಹ ಕವಚಗಳು ಒಂಭೈನೂರ ತೊಂಭತ್ತ ಒಂಭತ್ತು ಹೋಗಿ ಈಗ ಕೇವಲ ಒಬ್ಬ ಜೀವ ಮಾತ್ರನಿಗೆ ಮೋಕ್ಷ ಸಾಧನೆಗೆ ಬೇಕಾದ ಮಾರ್ಗವೆಂಬಂತೆ ಒಂದೇ ಕವಚ ಉಳಿದಿದೆ. ಸೂರ್ಯನಿಂದ ಏನು ಅನುಗ್ರಹ ಪಡೆದರೇನು? ಸಾವಿರಾರು ವರುಷಗಳಿಂದ ‘ಪುನರಪಿ ಜನನಂ, ಪುನರಪಿ ಮರಣಂ’ ಕಾಮ, ಕಾಂಚನ, ಕೀರ್ತಿ.. ಹೀಗೆ ಹೊದಿಕೆಯೇ ತುಂಬಿದೆ. ಇಂತಹ ಮಾಯೆಯ ಹೊದಿಕೆಯಿಂದ ಇಂದು ಹೊರಗೆ ಬಂದಿದ್ದೇನೆ. ನಿಮ್ಮ ಅನುಗ್ರಹದಿಂದ ಕೃತಾರ್ಥನಾದೆ…

ಊರ್ವಶಿ ಎಂಬವಳು ದಂಬೋದ್ಬವ ಎಂಬ ಜೀವನಿಗೆ ಕತ್ತಲೆಯನ್ನು ಬೀರಿದಂತಹ ನಾರಾಯಣನ ಮಾಯೆ. ಯಾವ ತಾಯಿ ಹೆತ್ತ ಮಗಳು ಅವಳಲ್ಲ. ಕೇವಲ ನಿಮ್ಮ ಸಂಕಲ್ಪದಿಂದ ಹುಟ್ಟಿದ್ದು. ಮೋಹದ ಅಂಧಕಾರದಲ್ಲಿ ಕೆಡಹಿ ಅವಳ ಜನ್ಮಸ್ಥಾನವಾದಂತಹ ಪಿತೃವಿನ ಸನ್ನಿಧಾನಕ್ಕೆ ನನ್ನನ್ನು ಎಳೆತಂದದ್ದು. ಪ್ರಕೃತಿಯಾಗಲೀ, ಮಾಯೆಯಾಗಲೀ ಅವಳು ಯೋಗ ಮಾಯೆಯಾಗಿ ಜೀವನನ್ನು ಆಕರ್ಷಿಸಿದಳು ಎಂತಾದರೆ, ನಿಜವಾದ ಪಿತೃ ಸ್ಥಾನಕ್ಕೆ ಪರಮಾತ್ಮನ ಸಾಕ್ಷಾತ್ಕಾರ ಮಾಡಿಸುತ್ತಾಳೆ. ನರನಾರಾಯಣರೆಂಬ ಉಭಯರಿಗೆ ಹುಟ್ಟಿದಂತಹ ಮಗಳು ಅವಳು. ಇದು ನಿಮ್ಮ ಸಂಕಲ್ಪ. ನಿಮ್ಮ ಶುದ್ಧ ಸಂಕಲ್ಪದ ಆವರಣವೇ ಅವಳ ಮೈ ಆಗಿರುತ್ತದೆಯೇ ಹೊರತು ಶುಕ್ಲ ಶೋಣಿತ ಸಮ್ಮಿಶ್ರಣವಾದುದಲ್ಲ. ಆದ ಕಾರಣ ಅವಿದ್ಯಾ ರೂಪಿಣಿಯಾಗಿ ನನ್ನನ್ನು ಎಳೆದರೂ ಕೊನೆಗೆ ವಿದ್ಯಾರೂಪಿಣಿಯಾಗಿ ನಿಮ್ಮ ದರ್ಶನವನ್ನು ಮಾಡಿದ್ದರಿಂದ ಈ ಹೊತ್ತು ಒಂದು ಬಯಕೆ ಉಳಿದಿದೆ…. ಉಳಿದೊಂದು ಕವಚಕ್ಕೆ ಮಾರ್ಗ ಸೂಚಿಸಿ…..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

9 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

10 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

11 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

17 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

23 hours ago