ಬೆಂಗಳೂರು: ಕನಕಪುರ ಬಂಡೆ ಎಂದು ನನ್ನನ್ನು ಹೇಳುತ್ತಾರೆ, ಆದರೆ ನಾನು ಬಂಡೆಯಾಗಲು ಬಯಸುವುದಿಲ್ಲ, ವಿಧಾನಸೌಧದ ಮುಂದಿನ ಚಪ್ಪಡಿಯಾಗುತ್ತೇನೆ. ಕಾರ್ಯಕರ್ತರೆಲ್ಲರೂ ಅದನ್ನು ತುಳಿದುಕೊಂಡು ವಿಧಾನಸೌಧ ಏರಬೇಕು ಎಂದು ಬಯಸುತ್ತೇನೆ. ಬಿಜೆಪಿಯವರು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಜೈಲಿಗೆ ಕಳುಹಿಸಿದ್ದರು, ಯಾವುದೇ ಕೇಸುಗಳಿಗೆ ಬಗ್ಗೋ ಜನ ನಾನಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಕೆಪಿಸಿಸಿ ಅಧ್ಯಕ್ಷರಾಗಿ 4 ತಿಂಗಳ ಹಿಂದೆ ನೇಮಕಗೊಂಡಿದ್ದ ಡಿ.ಕೆ. ಶಿವಕುಮಾರ್ ಇಂದು ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷನಾಗಿರಬಹುದು.ನಾನು ಕೂಡ ಕಾಂಗ್ರೆಸ್ ಕಾರ್ಯಕರ್ತನೇ. ಎಲ್ಲಾ ಸಮಸ್ಯೆಗಳನ್ನೂ ಎದುರಿಸಿದ್ದೇನೆ, ಅದು ಸ್ವಂತಕ್ಕಾಗಿ ಅಲ್ಲ ಎಂದರು. ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಗುಂಪುಗಾರಿಕೆಯಲ್ಲಿ ನನಗೆ ನಂಬಿಕೆಯಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…