ಸುಳ್ಯ: ಕನಕಮಜಲು ಗ್ರಾಮ ಪಂಚಾಯತ್, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗು ಯುವಕ ಮಂಡಲ ಕನಕಮಜಲು ಇದರ ಆಶ್ರಯದಲ್ಲಿ ಕೆಸರು ಗದ್ದೆ ಕ್ರೀಡಾಕೂಟ ನಡೆಯಿತು. ನೋಟರಿ ನ್ಯಾಯವಾದಿ ಮಹಮ್ಮದ್ ಪವಾಜ್ ಉದ್ಘಾಟಿಸಿದರು. ಕನಕಮಜಲು ಗ್ರಾ. ಪಂ. ಅಧ್ಯಕ್ಷೆ ಜಯಲತಾ ಗಬಲಡ್ಕ ಅಧ್ಯಕ್ಷತೆ ವಹಿಸಿದ್ದರು. ತಾ. ಪಂ. ಮಾಜಿ ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ ಮುಖ್ಯ ಅತಿಥಿಯಾಗಿದ್ದರು.
ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಮತ್ತು ಪುರುಷರಿಗೆ ವಾಲಿಬಾಲ್ ಹಾಗು ಇತರ ಸ್ಪರ್ಧೆಗಳು ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಂ.ಪಂ. ಉಪಾಧ್ಯಕ್ಷ ಶ್ರೀಧರ ಕುತ್ಯಾಳ ವಹಿಸಿದ್ದರು. ನಿವೃತ್ತ ಆರಕ್ಷಕ ಅಧಿಕಾರಿ ಕೃಷ್ಣಪ್ಪ ಗೌಡ ಕನ್ನಡ್ಕ ಬಹುಮಾನ ವಿತರಿಸಿದರು. ಯುವಕ ಮಂಡಲದ ಅಧ್ಯಕ್ಷ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು , ಕ್ರೀಡಾ ಕಾರ್ಯದರ್ಶಿ ಅಶ್ವಿತ್ ಮಳಿ, ಪ್ರಾ. ಕೃ.ಪ.ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕೆ, ಧನುಷ್ ಕಜೆಗದ್ದೆ ಉಪಸ್ಥಿತರಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…