Advertisement
ಕಾರ್ಯಕ್ರಮಗಳು

ಕನಕಮಜಲು ಯುವಕ ಮಂಡಲದ ವತಿಯಿಂದ ಸನ್ಮಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Share

ಸುಳ್ಯ: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು, ಯುವಕ ಮಂಡಲ ಕನಕಮಜಲು ವತಿಯಿಂದ ಸನ್ಮಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಡಿ. 28ರಂದು ಶ್ರೀ ನ. ರಾ. ಗೌ. ಸ. ಮಾ. ಹಿ. ಪ್ರಾ. ಶಾಲೆಯ ರಂಗಚಾವಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಂಡ್ಯದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕಿ ಡಾ. ಚೇತನ ರಾಧಾಕೃಷ್ಣ ಮೂರ್ಜೆ ಹಾಗೂ 2018-19 ನೇ ಸಾಲಿನ ಜಿಲ್ಲಾ ಮತ್ತು ರಾಜ್ಯ ಯುವ ಪ್ರಶಸ್ತಿಗೆ ಭಾಜನರಾದ ಯುವಕ ಮಂಡಲದ ಪೂರ್ವಧ್ಯಕ್ಷರಾದ ಸಂತೋಷ್ ಕುಮಾರ್ ನೆಡಿಲು, ಹರಿಪ್ರಸಾದ್ ಮಾಣಿಕೊಡಿ ಹಾಗೂ ಕಾರ್ಯದರ್ಶಿ ರಕ್ಷಿತ್ ಅಕ್ಕಿಮಲೆ ಇವರನ್ನು ಚಲನಚಿತ್ರ ಹಾಗೂ ರಂಗಭೂಮಿ ಕಲಾವಿದ ಮಂಡ್ಯ ರಮೇಶ್ ಸನ್ಮಾನಿಸಿದರು.

ಕರ್ನಾಟಕ ಅರಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕನಕಮಜಲು ಗ್ರಾ. ಪಂ. ಅಧ್ಯಕ್ಷೆ ಜಯಲತಾ ಗಬ್ಬಲಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ. ಪಂ. ಸದಸ್ಯೆ ಪುಷ್ಪಾವತಿ ಬಾಳಿಲ, ತಾ. ಪಂ. ಸದಸ್ಯ ತೀರ್ಥರಾಮ ಬಾಲಾಜೆ, ಯುವಕ ಮಂಡಲದ ಸಂಸ್ಕೃತಿಕ ಕಾರ್ಯದರ್ಶಿ ಅಶ್ವತ್ ಅಡ್ಕಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷ ಜಯಪ್ರಸಾದ್ ಕಾರಿಂಜ ಸ್ವಾಗತಿಸಿ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ವಂದಿಸಿ, ದಾಮೋದರ ಕಣಜಾಲು ನಿರೂಪಿಸಿದರು. ಬಳಿಕ ನಟನ ಮೈಸೂರು ದಿಶಾ ರಮೇಶ್ ಮತ್ತು ಬಳಗದವರಿಂದ ರಂಗ ಗೀತೆಗಳ ಗಾಯನ ನಂತರ ನಟನ ರಂಗಶಾಲೆ ಮೈಸುರು ಇವರಿಂದ ಮಂಡ್ಯ ರಮೇಶ್ ನಿರ್ದೇಶನದ ಚೋರ ಚರಣದಾಸ ನಾಟಕ ರಂಗ ಚಾವಡಿಯಲ್ಲಿ ಪ್ರದರ್ಶನಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

10 minutes ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

15 minutes ago

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

9 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

10 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

10 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

10 hours ago