Advertisement
ಕಾರ್ಯಕ್ರಮಗಳು

ಕನಕಮಜಲು ಯುವಕ ಮಂಡಲದ ವತಿಯಿಂದ ಸನ್ಮಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Share

ಸುಳ್ಯ: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು, ಯುವಕ ಮಂಡಲ ಕನಕಮಜಲು ವತಿಯಿಂದ ಸನ್ಮಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಡಿ. 28ರಂದು ಶ್ರೀ ನ. ರಾ. ಗೌ. ಸ. ಮಾ. ಹಿ. ಪ್ರಾ. ಶಾಲೆಯ ರಂಗಚಾವಡಿಯಲ್ಲಿ ನಡೆಯಿತು.

Advertisement

ಈ ಸಂದರ್ಭದಲ್ಲಿ ಮಂಡ್ಯದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕಿ ಡಾ. ಚೇತನ ರಾಧಾಕೃಷ್ಣ ಮೂರ್ಜೆ ಹಾಗೂ 2018-19 ನೇ ಸಾಲಿನ ಜಿಲ್ಲಾ ಮತ್ತು ರಾಜ್ಯ ಯುವ ಪ್ರಶಸ್ತಿಗೆ ಭಾಜನರಾದ ಯುವಕ ಮಂಡಲದ ಪೂರ್ವಧ್ಯಕ್ಷರಾದ ಸಂತೋಷ್ ಕುಮಾರ್ ನೆಡಿಲು, ಹರಿಪ್ರಸಾದ್ ಮಾಣಿಕೊಡಿ ಹಾಗೂ ಕಾರ್ಯದರ್ಶಿ ರಕ್ಷಿತ್ ಅಕ್ಕಿಮಲೆ ಇವರನ್ನು ಚಲನಚಿತ್ರ ಹಾಗೂ ರಂಗಭೂಮಿ ಕಲಾವಿದ ಮಂಡ್ಯ ರಮೇಶ್ ಸನ್ಮಾನಿಸಿದರು.

ಕರ್ನಾಟಕ ಅರಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕನಕಮಜಲು ಗ್ರಾ. ಪಂ. ಅಧ್ಯಕ್ಷೆ ಜಯಲತಾ ಗಬ್ಬಲಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ. ಪಂ. ಸದಸ್ಯೆ ಪುಷ್ಪಾವತಿ ಬಾಳಿಲ, ತಾ. ಪಂ. ಸದಸ್ಯ ತೀರ್ಥರಾಮ ಬಾಲಾಜೆ, ಯುವಕ ಮಂಡಲದ ಸಂಸ್ಕೃತಿಕ ಕಾರ್ಯದರ್ಶಿ ಅಶ್ವತ್ ಅಡ್ಕಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷ ಜಯಪ್ರಸಾದ್ ಕಾರಿಂಜ ಸ್ವಾಗತಿಸಿ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ವಂದಿಸಿ, ದಾಮೋದರ ಕಣಜಾಲು ನಿರೂಪಿಸಿದರು. ಬಳಿಕ ನಟನ ಮೈಸೂರು ದಿಶಾ ರಮೇಶ್ ಮತ್ತು ಬಳಗದವರಿಂದ ರಂಗ ಗೀತೆಗಳ ಗಾಯನ ನಂತರ ನಟನ ರಂಗಶಾಲೆ ಮೈಸುರು ಇವರಿಂದ ಮಂಡ್ಯ ರಮೇಶ್ ನಿರ್ದೇಶನದ ಚೋರ ಚರಣದಾಸ ನಾಟಕ ರಂಗ ಚಾವಡಿಯಲ್ಲಿ ಪ್ರದರ್ಶನಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

9 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

19 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

19 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago