Advertisement
ನಮ್ಮೂರ ಸುದ್ದಿ

ಕನಕಮಜಲು ಯುವಕ ಮಂಡಲ ಪದಗ್ರಹಣ ಸಮಾರಂಭ : ಅಧ್ಯಕ್ಷರಾಗಿ ಜಯಪ್ರಸಾದ್ ಕಾರಿಂಜ

Share

ಜಾಲ್ಸೂರು :  ಯುವಕ ಮಂಡಲ(ರಿ ) ಕನಕಮಜಲು ಇದರ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭವು ಭಾನುವಾರ  ಕನಕಮಜಲಿನ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭ ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ನಿರ್ದೇಶಕ  ವಿಜಯಕುಮಾರ್ ಉಬರಡ್ಕ  ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋದಿಸಿದರು. ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ  ಶಿಕ್ಷಕ ಶಶಿಧರ್ ಶುಭಹಾರೈಸಿದರು.

ಯುವಕಮಂಡಲ (ರಿ ) ಕನಕಮಜಲು ಇದರ 2019-2020 ನೇ ಸಾಲಿನ ಗೌರವಾಧ್ಯಕ್ಷರಾಗಿ ಹರಿಪ್ರಸಾದ್ ಮಾಣಿಕೋಡಿ, ನೂತನ ಅಧ್ಯಕ್ಷರಾಗಿ – ಜಯಪ್ರಸಾದ್ ಕಾರಿಂಜ, ಉಪಾಧ್ಯಕ್ಷರಾಗಿ – ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿಯಾಗಿ – ಬಾಲಚಂದ್ರ ನೆಡಿಲು, ಜೊತೆ ಕಾರ್ಯದರ್ಶಿ – ಹರ್ಷಿತ್ ಉಗ್ಗಮೂಲೆ, ಕ್ರೀಡಾ ಕಾರ್ಯದರ್ಶಿ – ಅಶ್ವಿತ್ ಮಳಿ, ಸಾಂಸ್ಕೃತಿಕ ಕಾರ್ಯದರ್ಶಿ – ಅಶ್ವತ್ಥ್ ಅಡ್ಕಾರ್, ಪ್ರತೀಕ ಪ್ರತಿನಿಧಿ – ಜಯದೀಪ್ ಕುದ್ಕುಳಿ, ಖಜಾಂಜಿ – ಸಂದೀಪ್ ಉಗ್ಗಮೂಲೆ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ -ವಿಶ್ವನಾಥ ಮಾಣಿಕೋಡಿ, ನಿರ್ದೇಶಕರುಗಳಾಗಿ – ಪ್ರಸನ್ನ ಮಾಣಿಕೋಡಿ, ಜಗದೀಶ್ ಮಾಣಿಕೋಡಿ, ಚಂದ್ರಶೇಖರ ನೆಡಿಲು ಆಯ್ಕೆಯಾದರು.

ಕನಕಮಜಲಿನ ಯುವಕಮಂಡಲದ ಅಧ್ಯಕ್ಷರು ಅದ ಹರಿಪ್ರಸಾದ್ ಮಾಣಿಕೊಡಿ, ಮುಖ್ಯಅತಿಥಿಯಾಗಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ವಿನೋಬನಗರ ಇಲ್ಲಿಯ ಶಿಕ್ಷಕರಾದ ಶಶಿಧರ್, ಯುವಜನ ಸಂಯುಕ್ತಮಂಡಳಿ (ರಿ )ಸುಳ್ಯ ಇದರ ನಿರ್ದೇಶಕರಾದ ವಿಜಯಕುಮಾರ್ ಉಬರಡ್ಕ, ಹಾಗೇ 2019-20 ಸಾಲಿನ ಕನಕಮಜಲು ಯುವಕ ಮಂಡಲದ ಗೌರವಾಧ್ಯಕ್ಷರಾದ ಸಂತೋಷ್ ನೆಡಿಲು, ಕಾರ್ಯದರ್ಶಿಯಾದ ರಕ್ಷಿತ್ ಅಕ್ಕಿಮಲೆ ಹಾಗು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನಕಮಜಲಿನ ಯುವಕಮಂಡಲದ ಸರ್ವಸದಸ್ಯರು ಉಪಸ್ಥಿತರಿದ್ದರು. ಅತಿಥಿಗಳನ್ನು ಜಯದೀಪ್ ಇವರು ಸ್ವಾಗತಿಸಿ, ಬಾಲಚಂದ್ರ ನೆಡಿಲು ಇವರು ವಂದಿಸಿದರು, ಕಾರ್ಯಕ್ರಮವನ್ನು ಲವಕುಮಾರ್ ಮಾಣಿಕೊಡಿ  ನಿರೂಪಿಸಿದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

3 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

4 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

4 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

11 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

16 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago