ಕನಕಮಜಲು:ಅಂತರಾಷ್ಟ್ರೀಯ ಯೋಗ ದಿನಾಚರಣೆ ಯುವಜನ ವಿಕಾಸ ಕೇಂದ್ರ, ಯುವಕ ಮಂಡಲ (ರಿ ) ಕನಕಮಜಲು ಇದರ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವ್ಯ. ಸೇ. ಸ. ಬ್ಯಾಂಕ್ ಕನಕಮಜಲು ಇದರ ‘ಕನಕ ಸೌದ ‘ಸಭಾಭವನದಲ್ಲಿ ಯೋಗ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕರಾಟೆ ಶಿಕ್ಷಕರಾದ ಚಂದ್ರಶೇಖರ ಕುದ್ಕುಳಿ ಇವರು ಸೂರ್ಯನಮಸ್ಕಾರ, ಸ್ಥಿರ ಮತ್ತು ಅದರ ಮಹತ್ವಗಳನ್ನು ತಿಳಿಸಿಕೊಟ್ಟರು. ಹಾಗೇ ನಿವೃತ್ತ ಶಿಕ್ಷಕರು, ಯೋಗ ಶಿಕ್ಷಕರು ಅದ ಆನಂದ ಮಾಸ್ತರ್ ಅಕ್ಕಿಮಲೆ ಇವರು ಪ್ರಾಣಾಯಾಮ ಬಗ್ಗೆ ಆಹಾರ ಪದ್ಧತಿ ಗಳ ಬಗ್ಗೆ ಮತ್ತು ಅರೋಗ್ಯವಂತ ಜೀವನಕ್ಕೆ ಬೇಕಾದ ಕೆಲವು ವಿಷಯಗಳನ್ನು ತಿಳಿಸಿದರು. ಹಾಗೇ ಮಳೆಗಾಲದ ಬೇಸಾಯಕ್ಕೆ ಬೇಕಾದ ತರಕಾರಿ ಬೀಜಗಳನ್ನು ಗ್ರಾಮಸ್ಥರಿಗೆ ಯುವಕ ಮಂಡಲ ವತಿಯಿಂದ ವಿತರಿಸಲಾಯಿತು.
ಯುವಕ ಮಂಡಲದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ್ ಕುತ್ಯಾಳ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…