ಕನಕಮಜಲು:ಅಂತರಾಷ್ಟ್ರೀಯ ಯೋಗ ದಿನಾಚರಣೆ ಯುವಜನ ವಿಕಾಸ ಕೇಂದ್ರ, ಯುವಕ ಮಂಡಲ (ರಿ ) ಕನಕಮಜಲು ಇದರ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವ್ಯ. ಸೇ. ಸ. ಬ್ಯಾಂಕ್ ಕನಕಮಜಲು ಇದರ ‘ಕನಕ ಸೌದ ‘ಸಭಾಭವನದಲ್ಲಿ ಯೋಗ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕರಾಟೆ ಶಿಕ್ಷಕರಾದ ಚಂದ್ರಶೇಖರ ಕುದ್ಕುಳಿ ಇವರು ಸೂರ್ಯನಮಸ್ಕಾರ, ಸ್ಥಿರ ಮತ್ತು ಅದರ ಮಹತ್ವಗಳನ್ನು ತಿಳಿಸಿಕೊಟ್ಟರು. ಹಾಗೇ ನಿವೃತ್ತ ಶಿಕ್ಷಕರು, ಯೋಗ ಶಿಕ್ಷಕರು ಅದ ಆನಂದ ಮಾಸ್ತರ್ ಅಕ್ಕಿಮಲೆ ಇವರು ಪ್ರಾಣಾಯಾಮ ಬಗ್ಗೆ ಆಹಾರ ಪದ್ಧತಿ ಗಳ ಬಗ್ಗೆ ಮತ್ತು ಅರೋಗ್ಯವಂತ ಜೀವನಕ್ಕೆ ಬೇಕಾದ ಕೆಲವು ವಿಷಯಗಳನ್ನು ತಿಳಿಸಿದರು. ಹಾಗೇ ಮಳೆಗಾಲದ ಬೇಸಾಯಕ್ಕೆ ಬೇಕಾದ ತರಕಾರಿ ಬೀಜಗಳನ್ನು ಗ್ರಾಮಸ್ಥರಿಗೆ ಯುವಕ ಮಂಡಲ ವತಿಯಿಂದ ವಿತರಿಸಲಾಯಿತು.
ಯುವಕ ಮಂಡಲದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ್ ಕುತ್ಯಾಳ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"