ಕನ್ನಡಿ

October 15, 2019
2:00 PM
ಒಡೆದು ಹೋದ ಕನ್ನಡಿಗೆ
ಮನೆಯಲ್ಲಿ ಜಾಗವಿಲ್ಲ..
ಇದಕ್ಕೆ ಅವರದು ನೂರಾರು ಕಾರಣಗಳು…
ಅದೇಷ್ಟೋ ಸಲ ಒಡೆದ
ನನ್ನ ಮನಸ್ಸು ಕಂಡು ಅದು ದುಃಖಿಸಿತು….
ನನ್ನ ನಗುವಿಗೆ ಅದು ಜೊತೆಯಾಗಿತ್ತು
ನಲ್ಲನ ಸವಿನೆನಪಲ್ಲಿ ಮೈಮರೆತಾಗ
ಅದು ನಾಚುತ್ತಿತ್ತು……
ಆದರೆ ನಾನೇಕೆ ಹೀಗೆ…..?
ಸಣ್ಣ ಒಡಕು ಮೂಡಿತೆಂದು
ತಿಪ್ಪೆ ಗುಂಡಿಗೆ ಎಸೆದು ಬಿಟ್ಟೆ….
ನನ್ನ ಕಣ್ಣೀರ ಕಂಡು ಅದೆಂದೂ
ನಗಲಿಲ್ಲ..!
ಸೋತು ನಿಂತಾಗ ಹೀಯಾಳಿಸಲಿಲ್ಲ
ನಿಜ….!
ಅದು ನನ್ನ ಪಾಲಿಗೆ,
ವಾಸ್ತವತೆಯ ತಿಳಿಸುವ ಗುರು,
ಸಂಭ್ರಮಕ್ಕೆ ಜೊತೆಯಾಗುವ ಸ್ನೇಹ,
ಕಣ್ಣೀರ ಒರೆಸುವ ಜೊತೆಗಾರ
ಎಲ್ಲವೂ ಆಗಿತ್ತು…..
ಆದರೆ ಇಂದೇಕೆ ಹೀಗೆ..?
ಜೋಪಾನ ಮಾಡಿದ ಕೈಗಳೇ ಜಾರಿದೆ.
ಕನ್ನಡಿ ಚೂರಾಗಿದೆ ಒಡೆದ ನನ್ನ ಮನಸ್ಸಂತೆ !
ನನ್ನ ಮನಸ್ಸಿನ ಗಾಯಕ್ಕೆ
ಪ್ರೀತಿಯ ಮುಲಾಮು ಸಿಗಬಹುದು…
ಆದರೆ ಒಡೆದು ಚೂರಾದ ಕನ್ನಡಿಗೆ..?
ತಿಪ್ಪೆ ಗುಂಡಿಯೇ ಕೊನೆಯೇ..?
       ಅಪೂರ್ವ ಕೊಲ್ಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಹೊಸರುಚಿ – ಎಳೆಯ ಹಲಸಿನ ಕಾಯಿ ಬಾಲ್ : ಕರಕರಾ, ರುಚಿಕರ ಮತ್ತು ಆರೋಗ್ಯಕರ ಸ್ನ್ಯಾಕ್
April 11, 2026
6:16 PM
by: ದಿವ್ಯ ಮಹೇಶ್
ಕುಟುಂಬದಲ್ಲೇ ಆರೋಗ್ಯದ ಬೀಜ – ಕುಟುಂಬದಲ್ಲಿ ಆರೋಗ್ಯಕರ ಅಭ್ಯಾಸಗಳ ಬೆಳವಣಿಗೆ
April 10, 2026
6:11 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror