ಉಜಿರೆ: ಎಲ್ಲಾ ಭಾಷೆಗಳ ಸಾಹಿತ್ಯ ಅಧ್ಯಯನ ಮಾಡಲಾಗಿದ್ದರೂ, ಇಂದಿನ ಕನ್ನಡ ಅನುವಾದಗಳು ನಮಗೆ ಆ ಸಾಹಿತ್ಯದ ಸ್ವರೂಪವನ್ನು ತೋರಿಸಿಕೊಟ್ಟಿವೆ. ಅನುವಾದಗಳಿಂದಾಗಿ ಶೇಕ್ಸ್ ಪಿಯರ್ನಂತಹ ವಿಶ್ವ ವಿಖ್ಯಾತ ಲೇಖಕರು ನಮಗೆ ಹತ್ತಿರವಾಗಿದ್ದಾರೆ ಎಂದು ಖ್ಯಾತ ವಿಮರ್ಶಕ ಪ್ರೊ.ಟಿ.ಪಿ.ಅಶೋಕ್ ಹೇಳಿದರು.
ಅವರು ಉಜಿರೆಯಲ್ಲಿ ಎಸ್.ಡಿ.ಎಂ.ಕಾಲೇಜಿನಲ್ಲಿ ಕನ್ನಡ ಸಂಘ ಮತ್ತು ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರೀಕ್ ನಾಟಕಗಳು ಮನುಷ್ಯರನ್ನು ಕುಲದ ಸಮಸ್ಯೆಯ ನೆಲೆಯಲ್ಲಿ ವಿವರಿಸಿದರೆ, ಶೇಕ್ಸ್ ಪಿಯರ್ ನಾಟಕಗಳು ರಾಜಕೀಯ ವ್ಯವಸ್ಥೆಯ ಸಮಸ್ಯೆಗಳನ್ನು ಹೇಳುತ್ತವೆ ಎಂದರು.
ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಅಧ್ಯಕ್ಷತೆ ವಹಿಸಿದರು. ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥಡಾ. ಬಿ.ಪಿ. ಸಂಪತ್ಕುಮಾರ್ ಸ್ವಾಗತಿಸಿದರು. ಡಾ. ಕೆ.ವಿ. ನಾಗರಾಜಪ್ಪ ಧನ್ಯವಾದವಿತ್ತರು. ಡಾ. ಬೋಜಮ್ಮ ಕಾರ್ಯಕ್ರಮ ನಿರ್ವಹಿಸಿದರು.
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…