ಉಜಿರೆ: ಎಲ್ಲಾ ಭಾಷೆಗಳ ಸಾಹಿತ್ಯ ಅಧ್ಯಯನ ಮಾಡಲಾಗಿದ್ದರೂ, ಇಂದಿನ ಕನ್ನಡ ಅನುವಾದಗಳು ನಮಗೆ ಆ ಸಾಹಿತ್ಯದ ಸ್ವರೂಪವನ್ನು ತೋರಿಸಿಕೊಟ್ಟಿವೆ. ಅನುವಾದಗಳಿಂದಾಗಿ ಶೇಕ್ಸ್ ಪಿಯರ್ನಂತಹ ವಿಶ್ವ ವಿಖ್ಯಾತ ಲೇಖಕರು ನಮಗೆ ಹತ್ತಿರವಾಗಿದ್ದಾರೆ ಎಂದು ಖ್ಯಾತ ವಿಮರ್ಶಕ ಪ್ರೊ.ಟಿ.ಪಿ.ಅಶೋಕ್ ಹೇಳಿದರು.
ಅವರು ಉಜಿರೆಯಲ್ಲಿ ಎಸ್.ಡಿ.ಎಂ.ಕಾಲೇಜಿನಲ್ಲಿ ಕನ್ನಡ ಸಂಘ ಮತ್ತು ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರೀಕ್ ನಾಟಕಗಳು ಮನುಷ್ಯರನ್ನು ಕುಲದ ಸಮಸ್ಯೆಯ ನೆಲೆಯಲ್ಲಿ ವಿವರಿಸಿದರೆ, ಶೇಕ್ಸ್ ಪಿಯರ್ ನಾಟಕಗಳು ರಾಜಕೀಯ ವ್ಯವಸ್ಥೆಯ ಸಮಸ್ಯೆಗಳನ್ನು ಹೇಳುತ್ತವೆ ಎಂದರು.
ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಅಧ್ಯಕ್ಷತೆ ವಹಿಸಿದರು. ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥಡಾ. ಬಿ.ಪಿ. ಸಂಪತ್ಕುಮಾರ್ ಸ್ವಾಗತಿಸಿದರು. ಡಾ. ಕೆ.ವಿ. ನಾಗರಾಜಪ್ಪ ಧನ್ಯವಾದವಿತ್ತರು. ಡಾ. ಬೋಜಮ್ಮ ಕಾರ್ಯಕ್ರಮ ನಿರ್ವಹಿಸಿದರು.
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…