ಉಜಿರೆ: ಎಲ್ಲಾ ಭಾಷೆಗಳ ಸಾಹಿತ್ಯ ಅಧ್ಯಯನ ಮಾಡಲಾಗಿದ್ದರೂ, ಇಂದಿನ ಕನ್ನಡ ಅನುವಾದಗಳು ನಮಗೆ ಆ ಸಾಹಿತ್ಯದ ಸ್ವರೂಪವನ್ನು ತೋರಿಸಿಕೊಟ್ಟಿವೆ. ಅನುವಾದಗಳಿಂದಾಗಿ ಶೇಕ್ಸ್ ಪಿಯರ್ನಂತಹ ವಿಶ್ವ ವಿಖ್ಯಾತ ಲೇಖಕರು ನಮಗೆ ಹತ್ತಿರವಾಗಿದ್ದಾರೆ ಎಂದು ಖ್ಯಾತ ವಿಮರ್ಶಕ ಪ್ರೊ.ಟಿ.ಪಿ.ಅಶೋಕ್ ಹೇಳಿದರು.
ಅವರು ಉಜಿರೆಯಲ್ಲಿ ಎಸ್.ಡಿ.ಎಂ.ಕಾಲೇಜಿನಲ್ಲಿ ಕನ್ನಡ ಸಂಘ ಮತ್ತು ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರೀಕ್ ನಾಟಕಗಳು ಮನುಷ್ಯರನ್ನು ಕುಲದ ಸಮಸ್ಯೆಯ ನೆಲೆಯಲ್ಲಿ ವಿವರಿಸಿದರೆ, ಶೇಕ್ಸ್ ಪಿಯರ್ ನಾಟಕಗಳು ರಾಜಕೀಯ ವ್ಯವಸ್ಥೆಯ ಸಮಸ್ಯೆಗಳನ್ನು ಹೇಳುತ್ತವೆ ಎಂದರು.
ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಅಧ್ಯಕ್ಷತೆ ವಹಿಸಿದರು. ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥಡಾ. ಬಿ.ಪಿ. ಸಂಪತ್ಕುಮಾರ್ ಸ್ವಾಗತಿಸಿದರು. ಡಾ. ಕೆ.ವಿ. ನಾಗರಾಜಪ್ಪ ಧನ್ಯವಾದವಿತ್ತರು. ಡಾ. ಬೋಜಮ್ಮ ಕಾರ್ಯಕ್ರಮ ನಿರ್ವಹಿಸಿದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…