ಉಜಿರೆ: ಎಲ್ಲಾ ಭಾಷೆಗಳ ಸಾಹಿತ್ಯ ಅಧ್ಯಯನ ಮಾಡಲಾಗಿದ್ದರೂ, ಇಂದಿನ ಕನ್ನಡ ಅನುವಾದಗಳು ನಮಗೆ ಆ ಸಾಹಿತ್ಯದ ಸ್ವರೂಪವನ್ನು ತೋರಿಸಿಕೊಟ್ಟಿವೆ. ಅನುವಾದಗಳಿಂದಾಗಿ ಶೇಕ್ಸ್ ಪಿಯರ್ನಂತಹ ವಿಶ್ವ ವಿಖ್ಯಾತ ಲೇಖಕರು ನಮಗೆ ಹತ್ತಿರವಾಗಿದ್ದಾರೆ ಎಂದು ಖ್ಯಾತ ವಿಮರ್ಶಕ ಪ್ರೊ.ಟಿ.ಪಿ.ಅಶೋಕ್ ಹೇಳಿದರು.
ಅವರು ಉಜಿರೆಯಲ್ಲಿ ಎಸ್.ಡಿ.ಎಂ.ಕಾಲೇಜಿನಲ್ಲಿ ಕನ್ನಡ ಸಂಘ ಮತ್ತು ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರೀಕ್ ನಾಟಕಗಳು ಮನುಷ್ಯರನ್ನು ಕುಲದ ಸಮಸ್ಯೆಯ ನೆಲೆಯಲ್ಲಿ ವಿವರಿಸಿದರೆ, ಶೇಕ್ಸ್ ಪಿಯರ್ ನಾಟಕಗಳು ರಾಜಕೀಯ ವ್ಯವಸ್ಥೆಯ ಸಮಸ್ಯೆಗಳನ್ನು ಹೇಳುತ್ತವೆ ಎಂದರು.
ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಅಧ್ಯಕ್ಷತೆ ವಹಿಸಿದರು. ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥಡಾ. ಬಿ.ಪಿ. ಸಂಪತ್ಕುಮಾರ್ ಸ್ವಾಗತಿಸಿದರು. ಡಾ. ಕೆ.ವಿ. ನಾಗರಾಜಪ್ಪ ಧನ್ಯವಾದವಿತ್ತರು. ಡಾ. ಬೋಜಮ್ಮ ಕಾರ್ಯಕ್ರಮ ನಿರ್ವಹಿಸಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…