ಉಜಿರೆ: ಎಲ್ಲಾ ಭಾಷೆಗಳ ಸಾಹಿತ್ಯ ಅಧ್ಯಯನ ಮಾಡಲಾಗಿದ್ದರೂ, ಇಂದಿನ ಕನ್ನಡ ಅನುವಾದಗಳು ನಮಗೆ ಆ ಸಾಹಿತ್ಯದ ಸ್ವರೂಪವನ್ನು ತೋರಿಸಿಕೊಟ್ಟಿವೆ. ಅನುವಾದಗಳಿಂದಾಗಿ ಶೇಕ್ಸ್ ಪಿಯರ್ನಂತಹ ವಿಶ್ವ ವಿಖ್ಯಾತ ಲೇಖಕರು ನಮಗೆ ಹತ್ತಿರವಾಗಿದ್ದಾರೆ ಎಂದು ಖ್ಯಾತ ವಿಮರ್ಶಕ ಪ್ರೊ.ಟಿ.ಪಿ.ಅಶೋಕ್ ಹೇಳಿದರು.
ಅವರು ಉಜಿರೆಯಲ್ಲಿ ಎಸ್.ಡಿ.ಎಂ.ಕಾಲೇಜಿನಲ್ಲಿ ಕನ್ನಡ ಸಂಘ ಮತ್ತು ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರೀಕ್ ನಾಟಕಗಳು ಮನುಷ್ಯರನ್ನು ಕುಲದ ಸಮಸ್ಯೆಯ ನೆಲೆಯಲ್ಲಿ ವಿವರಿಸಿದರೆ, ಶೇಕ್ಸ್ ಪಿಯರ್ ನಾಟಕಗಳು ರಾಜಕೀಯ ವ್ಯವಸ್ಥೆಯ ಸಮಸ್ಯೆಗಳನ್ನು ಹೇಳುತ್ತವೆ ಎಂದರು.
ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಅಧ್ಯಕ್ಷತೆ ವಹಿಸಿದರು. ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥಡಾ. ಬಿ.ಪಿ. ಸಂಪತ್ಕುಮಾರ್ ಸ್ವಾಗತಿಸಿದರು. ಡಾ. ಕೆ.ವಿ. ನಾಗರಾಜಪ್ಪ ಧನ್ಯವಾದವಿತ್ತರು. ಡಾ. ಬೋಜಮ್ಮ ಕಾರ್ಯಕ್ರಮ ನಿರ್ವಹಿಸಿದರು.
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…