Advertisement
MIRROR FOCUS

ಕನ್ನಡ ಮಣ್ಣಿನ ಮಾರಿ ಕಳೆಯಲು ಈಗ ಬರುತ್ತಿದ್ದಾನೆ ಕೇರಳದ `ಕಳೆಂಜ’

Share

ನಮ್ಮ ನಾಡಿನ ಸಂಸ್ಕೃತಿ-ಸಂಪ್ರದಾಯ, ಆಚಾರ-ಆಚರಣೆ, ನಂಬಿಕೆ-ಶ್ರದ್ಧೆ ಎಲ್ಲವೂ ನಮ್ಮ ಮನಸ್ಸನ್ನು ಗಟ್ಟಿ ಮಾಡುವ ಹಾಗು ಭರವಸೆಯ ಕಡೆಗೆ ನೋಟ ಹರಿಸುವ ಸದುದ್ದೇಶ ಕಾಣುತ್ತದೆ. ಹೇಗೇ ನೋಡಿ ಒಂದು ಆಚರಣೆ , ನಂಬಿಕೆ, ಸಂಪ್ರದಾಯದ ಹಿಂದೆ ಒಂದು ಸಂದೇಶ ಇರುತ್ತದೆ. ಆಧುನಿಕ ಯುಗದಲ್ಲೂ ಅದು ವಿಶೇಷ , ಸಿಲ್ಲಿ ವಿಷಯ ಅಂತ ಅನಿಸಿದರೂ ಆಳಕ್ಕೆ ಇಳಿದಾಗ ಸಮಸ್ತ ಸಮಾಜಕ್ಕೆ, ಸಮುದಾಯಕ್ಕೆ ಭರವಸೆ ನೀಡುತ್ತದೆ. ಇದೇ ಅಲ್ಲವೇ ಆಗಬೇಕಾದ್ದು ? ಇಂತಹ ಭರವಸೆ ನೀಡುವ ಆಚರಣೆಯ ಕಡೆಗೆ ಫೋಕಸ್..

 


 

ಸುಳ್ಯ: ಕರ್ನಾಟಕದ ಮಣ್ಣಿನ ಮಾರಿಯನ್ನು ಕಳೆಯಲು ನೆರೆಯ ಕೇರಳದ ಭೂತ…!

ಆಟಿ ತಿಂಗಳಲ್ಲಿ ಜನರ ಜೀವನದಲ್ಲಿ ಉಂಟಾಗುವ ರೋಗ-ರುಜಿನ, ಕಷ್ಟ ಕಾರ್ಪಣ್ಯಗಳ ಪರಿಹಾರಕ್ಕಾಗಿ `ಆಡಿ ವೇಡನ್’ (ಕಳೆಂಜ) ಎಂಬ ಕೇರಳ ನಾಡಿನ ಭೂತ ಕನ್ನಡ ನಾಡಿನ ಮಣ್ಣನ್ನು ಪಾವನಗೊಳಿಸುತಿದೆ. ನಾಡಿನೆಲ್ಲೆಡೆ ತುಳುನಾಡಿನ ಆಟಿಕಳೆಂಜ ಆಟಿ ತಿಂಗಳ ಮಾರಿ ಕಳೆಯಲು ಮನೆ ಮನೆ ಬರುವುದು ವಾಡಿಕೆ. ಜೊತೆಗೆ ನೆರೆಯ ಕೇರಳದ ಕಳೆಂಜನೂ ಸುಳ್ಯ ತಾಲೂಕಿನ ಗಡಿ ಗ್ರಾಮಗಳ ಮನೆ ಮನೆ ತಿರುಗಾಟ ಮಾಡುತ್ತಿದೆ.

ಗಡಿ ಪ್ರದೇಶವಾದ ಕೋಲ್ಚಾರಿನ ಕುಂಞಕಣ್ಣನ್ ಮತ್ತು ಅಡೂರಿನ ಸುಧಾಕರನ್ ನೇತೃತ್ವದಲ್ಲಿ ಪ್ರತಿ ವರ್ಷವೂ ಆಡಿ ವೇಡನ್ ಭೂತವನ್ನು ಕಟ್ಟಿ ಕರ್ನಾಟಕಕ್ಕೆ ಬರುತ್ತಾರೆ. ಆಟಿ ತಿಂಗಳ 15 ರವರೆಗೆ ಇವರು ಕರ್ನಾಟಕದ ಮಣ್ಣಿನಲ್ಲಿ ಮನೆ ಮನೆ ತಿರುಗಾಟ ಮಾಡಿ 15 ರ ಬಳಿಕ ಕೇರಳದ ಮನೆ ಮನೆ ಭೇಟಿಗೆ ಹೋಗುತ್ತಾರೆ. ಕುಂಞಕಣ್ಣನ್, ಸುಧಾಕರ ಮತ್ತು ಪೊಯಿನಾಚ್ಚಿಯ ಮುರಳಿ ನೇತೃತ್ವದಲ್ಲಿ ಆಟಿ ತಿಂಗಳ ಒಂದರಂದು ಇಲ್ಲಿನ ಮನೆಗಳಲ್ಲಿ ತಿರುಗಾಟ ಆರಂಭಿಸಿದ್ದಾರೆ. ಕುಂಞಕಣ್ಣನ್ ಮತ್ತು ಸುಧಾಕರನ್ ನೇತೃತ್ವದಲ್ಲಿ ಕಳೆದ 40 ವರ್ಷಗಳಿಂದಲೂ ಹೆಚ್ಚು ಕಾಲದಿಂದ ಸಂಪ್ರದಾಯದಂತೆ `ಆಡಿ ವೇಡನ್’ ಕೇರಳ ಮತ್ತು ಕರ್ನಾಟಕದ ಗ್ರಾಮಗಳ ಮನೆ ಮನೆಗಳಿಗೆ ಬರುತ್ತಾರೆ.

ಜನರು ಭಕ್ತಿ ಭಾವದಿಂದ ಈ ಕಳೆಂಜನನ್ನು ಸ್ವಾಗತಿಸುತ್ತಾರೆ. ಮನೆಯ ಮುಂದೆ ಉರಿಸಿಟ್ಟ ದೀಪದ ಮುಂದೆ ಚೆಂಡೆಯ ಮತ್ತು ಪಾಡ್ದನದ ತಾಳಕ್ಕೆ ಆಡಿವೇಡನ್ ಕುಣಿದು ಮನೆಯ ಮಾರಿಯನ್ನು ಕಳೆಯುತ್ತಾರೆ. ಇವರಿಗೆ ಹಣ, ಅಕ್ಕಿ, ತೆಂಗಿನ ಕಾಯಿ ಮತ್ತಿತರ ಫಲ ವಸ್ತುಗಳನ್ನು ನೀಡಿ ಕಳಿಸಲಾಗುತ್ತಿದೆ. ಶಿವನ ಮತ್ತು ಪಾರ್ವತಿಯ ಪ್ರತಿರೂಪಗಳಾದ ಆಡಿವೇಡನ್ ಆಟಿ ತಿಂಗಳಲ್ಲಿ ಬಂದು ಮನುಷ್ಯನಿಗೆ ಮತ್ತು ಪ್ರಕೃತಿಗೆ ಬಾದಿಸಿದ ಕಷ್ಟ ಕಾರ್ಪಣ್ಯವನ್ನು ದೂರ ಮಾಡುತ್ತಾರೆ ಎಂಬುದು ನಂಬಿಕೆ. ಪಾಶುಪತಾಸ್ತ್ರಕ್ಕಾಗಿ ತಪಸ್ಸು ಮಾಡಿದ್ದ ಅರ್ಜುನನ್ನು ಶಿವ ಮತ್ತು ಪಾರ್ವತಿ ಬೇಟೆಗಾರರ ವೇಷ ಧರಿಸಿ ಬಂದು ಪರೀಕ್ಷಿಸಿದ್ದರು. ಇದರ ಪ್ರತಿರೂಪವಾಗಿ ಆಟಿ ತಿಂಗಳಲ್ಲಿ `ಆಡಿ ವೇಡನ್’ ಮನೆ ಮನೆ ಭೇಟಿ ನೀಡಿ ಮಾರಿ ಕಳೆಯುತ್ತಾರೆ, ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡಿ ಜೀವನದಲ್ಲಿ ಸಂತೋಷವನ್ನೂ, ಐಶ್ವರ್ಯವನ್ನೂ ಕೊಡ ಮಾಡುತ್ತಾನೆ ಎಂಬುದು ಜನರ ನಂಬಿಕೆ. ಕೆಲವು ಕಡೆಗಳಲ್ಲಿ ಶಿವ ಮತ್ತು ಪಾರ್ವತಿ ಎಂದು ಎರಡು ಕಳೆಂಜನನ್ನು ಕಟ್ಟಲಾಗುತ್ತದೆ. ಕೆಲವೆಡೆ ಒಂದು ಮಾತ್ರ ಇರುತ್ತದೆ.

ಆಧುನಿಕ ಜೀವನದ ಭರಾಟೆಯಲ್ಲೂ ಹಳೆಯ ಕಾಲದ ಸಂಪ್ರದಾಯ, ವಾಡಿಕೆಗಳು ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಜೀವಂತವಾಗಿದ್ದು ಜನರ ಬದುಕಿನಲ್ಲಿ ಹಾಸು ಹೊಕ್ಕಾಗಿದೆ. ಶ್ರದ್ಧೆ, ಭಕ್ತಿ, ಭಾವದೊಂದಿಗೆ ಜನತೆ ಅದನ್ನು ಪರಿಪಾಲಿಸುತ್ತಾ ಬರುತ್ತಾರೆ. ಕಳೆಂಜನಂತಹ ಸಂಪ್ರದಾಯಗಳು ಸಂಸ್ಕೃತಿ, ಸಂಪ್ರದಾಯಗಳ ಮಹತ್ವವನ್ನು ನೆನಪಿಸುತ್ತಿದೆ. ಕಳೆಂಜ ಆಟಿ ತಿಂಗಳಲ್ಲಿನ ಮಾರಿಯನ್ನು ಕಳೆಯಲು ಬರುವ ಶಿವದೂತರು ಎಂಬುದು ಜನಪದರ ನಂಬಿಕೆ. ಮನೆಗಳಿಗೆ ತಲಾಂತರಗಳಿಂದ ತಪ್ಪದೇ ಬರುವ ಇವರನ್ನು ಗೌರವಾಧರಗಳನ್ನು ನೀಡಿ ಸ್ವಾಗತಿಸಿ ಆದರಿಸುತ್ತೇವೆ. ಸುಳ್ಯವು ಹಲವಾರು ಸಂಸ್ಕೃತಿಗಳ ನೆಲೆವೀಡಾದ ಕಾರಣ ಇಲ್ಲಿ ಕನ್ನಡ ಮತ್ತು ಮಲಯಾಳೀ ಸಂಸ್ಕೃತಿಗಳು ಸಮನಾಗಿ ಮೇಳೈಸಿದೆ. ಆಡಿವೇಡನ್, ಆಟಿಕಳೆಂಜದಂತಹ ಆಚರಣೆಗಳು ಅದಕ್ಕೆ ಉದಾಹರಣೆಯಾಗಿವೆ ಎನ್ನುತ್ತಾರೆ ಗ್ರಾಮೀಣ ಜನರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

20 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

21 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

23 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago