ಸುದ್ದಿಗಳು

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಾದಕ ವ್ಯಸನದ ವಿರುದ್ದ ಜನಸಂಚಲನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಆತೂರು: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಾದಕ ವ್ಯಸನದ ವಿರುದ್ಧ ಜನ ಸಂಚಲನ ಕಾರ್ಯಕ್ರಮವು ಆರೋಗ್ಯ ಕರ್ನಾಟಕ ಯುವ ಜನ ಜಾಗೃತಿ ಎಂಬ ನಾಮದೊಂದಿಗೆ
ಎಸ್.ಕೆ.ಎಸ್.ಎಸ್.ಎಫ್ ಆತೂರು ಕ್ಲಸ್ಟರ್ ಇದರ ವತಿಯಿಂದ ಶುಕ್ರವಾರ ಸಂಜೆ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿ ಅಝ್ಮಿಯಾ ಕಾಂಪ್ಲೆಕ್ಸ್ ವಠಾರದಲ್ಲಿ ಎಸ್.ಕೆ.ಎಸ್.ಎಸ್ ಎಫ್
ಆತೂರು ಕ್ಲಸ್ಟರ್ ಅಧ್ಯಕ್ಷರಾದ ಸಿದ್ಧೀಖ್ ನೀರಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಆತೂರಿನ ಸಯ್ಯಿದ್ ಮಹಮ್ಮದ್ ಜುನೈದ್ ಜಿಫ್ರಿ ತಂಙಳ್ ದುವಾ ನೆರವೇರಿಸಿ ಮಾತನಾಡಿ, ಮಾದಕ ವ್ಯಸನ ಎನ್ನುವುದು ಯಾವುದೇ ಧರ್ಮ ಅಥವಾ ಜಾತಿಗೆ ಸೀಮಿತವಾಗಿಲ್ಲ, ಎಲ್ಲಾ
ವರ್ಗಕ್ಕೂ ಈ ಅನಿಷ್ಟ ಆವರಿಸಿದೆ, ಇದನ್ನು ನಿರ್ಮೂಲನ ಮಾಡಬೇಕಾದರೆ ಯುವ ಜನತೆ ಮುಂದೆ ಬರಬೇಕು ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆತೂರು ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಸಯ್ಯಿದ್ ಅನಸ್ ತಂಙಳ್ ಗಂಡಿಬಾಗಿಲು ಕನ್ನಡದ ಆಚರಣೆ ನ. 1ಕ್ಕೆ ಮಾತ್ರ ಸೀಮಿತವಾಗದೆ ನಿತ್ಯ ನಿರಂತರ ಹಬ್ಬವಾಗಬೇಕು, ಇಂದು ಕನ್ನಡದ ಬಳಕೆ ಎಲ್ಲಾ ಕ್ಷೇತ್ರದಲ್ಲೂ ಕಡಿಮೆಯಾಗಿದೆ, ನಾವು ನಮ್ಮ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಂಡು ಬಳಕೆ ಮಾಡಿದರೆ ಭಾಷೆ , ಸಂಸ್ಕೃತಿ ಉಳಿಯಬಹುದು ಎಂದೂ, ಮಾದಕ ವ್ಯಸನದ ಬಗ್ಗೆ ಇಂದು ಇದು ಒಂದು ಫ್ಯಾಷನ್ ಆಗಿ ಹೋಗಿದೆ, ಆದರೆ ಇದು ಮನುಕುಲಕ್ಕೆ ಮಾರಕವಾಗಿರುವುದರಿಂದ ಇದರ ವಿರುದ್ಧ ಜಾಗೃತಿ ಅನಿವಾರ್ಯವಾಗಿದೆ ಎಂದರು.
ಉಳ್ಳಾಲದ ಸಯ್ಯದ್ ಮದನಿ ಅರೆಬಿಕ್ ಕಾಲೇಜಿನ ವಿದ್ಯಾರ್ಥಿ ಅನೀಸ್ ಸಾಲ್ಮರು ಪ್ರಮೇಯ ಭಾಷಣ ಮಾಡಿ, ಆಂಗ್ಲ ಭಾಷೆಯ ವ್ಯಾಮೋಹದಿಂದಾಗಿ 2000 ವರ್ಷ ಇತಿಹಾಸ ಇರುವ ಆದಿದ್ರಾವಿಡ ಭಾಷೆಯಾದ ಕನ್ನಡಕ್ಕೆ ಅಪಾಯ ಬಂದೊದಗಿದೆ ಎಂದರು. ಎಸ್.ಕೆ.ಎಸ್.ಎಸ್ ಎಫ್ ಆತೂರು ಕ್ಲಸ್ಟರ್ ಸಂಘಟನೆ ಕಾರ್ಯದರ್ಶಿ ಅಬ್ದುರ್ರಝಾಖ್ ದಾರಿಮಿ ನೇರೆಂಕಿ ಟ್ರೈಸನೇರಿಯಂ ಸಂದೇಶ ಭಾಷಣ ಮಾಡಿದರು. ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ. ರಘು, ಸ. ಹಿ.ಪ್ರಾ ಶಾಲೆ ರಾಮಕುಂಜ ಇದರ ಮುಖ್ಯ ಶಿಕ್ಷಕ ಎಂ.ಮಹೇಶ್ ಮಾತನಾಡಿ ಶುಭ ಹಾರೈಸಿದರು.
ಎಸ್.ಕೆ.ಎಸ್.ಎಸ್ ಎಫ್ ಆತೂರು ಶಾಖೆ ಟ್ರೆಂಡ್ ಕಾರ್ಯದರ್ಶಿ ನಾಸೀರ್  ಎ.ಎಸ್ ಪ್ರತಿಜ್ಞಾ ವಿಧಿ ಭೋಧಿಸಿದರು. ಎಸ್.ಕೆ.ಎಸ್.ಬಿ.ವಿ ರೇಂಜ್ ವಿದ್ಯಾರ್ಥಿಗಳಿಂದ
ಕರಪತ್ರ ವಿತರಣೆ ಮಾಡಲಾಯಿತು.
Advertisement
Advertisement

ಕಾರ್ಯಕ್ರಮದಲ್ಲಿ ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ನ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬಿ. ಕೆ ಆತೂರು, ಬದ್ರಿಯಾ ಶಾಲೆಯ ಆತೂರು ಇದರ ಸಂಚಾಲಕರಾದ ಆದಂ ಪಿಲಿಕುಡೆಲ್, ಅಯ್ಯುಬ್ ಹಾಜಿ ಅಮೈ, ರೇಂಜ್ ಮದ್ರಸ ಮೇನೇಜ್ಮೆಂಟ್ ಕಾರ್ಯದರ್ಶಿ ಮುಹಮ್ಮದ್ ರಫೀಖ್ ಗಂಡಿಬಾಗಿಲು, ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಕೋಶಾಧಿಕಾರಿ ಅಬ್ದುಲ್ ಅಝೀಝ್ ಬಿ.ಕೆ,  ಕೊಯಿಲಾ  ಗ್ರಾಮ ಫಂಚಾಯತ್ ಸದಸ್ಯ ಕೆ ಎ ಸುಲೈಮಾನ್, ರಾಮಕುಂಜ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಹೀಮಾನ್, ಸಿರಾಜ್, ಇಸ್ಮಾಈಲ್ ತಂಙಳ್ ಉಪ್ಪಿನಂಗಡಿ, ಇಬ್ರಾಹಿಂ ಮಜಲ್ ಅತಿಥಿಗಳಾಗಿ ಭಾಗವಹಿಸಿದರು.

ಈ ಕಾರ್ಯಕ್ರಮದಲ್ಲಿ ಬದ್ರುದ್ದೀನ್ ಮುಸ್ಲಿಯಾರ್, ಅಬ್ದುಲ್ ರಝಾಕ್ ದಾರಿಮಿ ನೇರೆಂಕಿ, ಮುನೀರ್ ಅನ್ವರಿ, ಮೂಸಾ ಮುಸ್ಲಿಯಾರ್, ರೇಂಜ್ ಗೊಳಪಟ್ಟ ಮದ್ರಸಗಳ ಮುಖ್ಯಗುರುಗಳು, ಸಹಅಧ್ಯಾಪಕರು, ಆತೂರು ಕ್ಲಸ್ಟರ್ ಪ್ರಥಿನಿಧಿಗಲು ಜಕಾರಿಯಾ ಮುಸ್ಲಿಯಾರ್, B R ಅಬ್ದುಲ್ ಖಾದರ್, ಇಸ್ಮಾಈಲ್ ಪಾಲ್ಟಾಡಿ, ಅಶ್ರಫ್ ಕುದ್ಲೂರು, ಇಸ್ಮಾಈಲ್ ಆತೂರುಬೈಲು, ಹನೀಫ್ ಪೆರಿಯಡ್ಕ, ಹನೀಫ್ ನೀರಾಜೆ, ಖಲಾಂದರ್ ಗಂಡಿಬಾಗಿಲು, ಅಬ್ದುಲ್ ರಹೀಮಾನ್ ಅರ್ಷಾದಿ, ಅಜೀಜ್ ಪಾಲ್ಟಾಡಿ, ಉಮರುಲ್ ಫಾರೂಕ್.ಬಿ, ಸಿದ್ಧೀಖ್ ಎನ್, ಇಕ್ಬಾಲ್, ಜಂಇಯ್ಯತುಲ್ ಮುಅಲ್ಲಿಮೀನ್ ಪದಾಧಿಕಾರಿಗಳು, ಮದ್ರಸ ಮೇನೇಜ್ಮೆಂಟ್ ಪದಾಧಿಕಾರಿಗಳು, ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.

ಎಸ್.ಕೆ.ಎಸ್.ಎಸ್ ಎಫ್ ಕ್ಯಾಂಪಸ್ ವಿಂಗ್ ಆತೂರು ಕ್ಲಸ್ಟರ್ ಕನ್ವೀನರ್ ರಾಝಿಕ್ ಸ್ವಾಗತಿಸಿದರು. ಎಸ್.ಕೆ.ಎಸ್.ಎಸ್ ಎಫ್ ಆತೂರು ಕ್ಲಸ್ಟರ್ ಸದಸ್ಯ ರಫೀಕ್ ಗೊಳಿತ್ತಡಿ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದ ಮಾಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

3 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

4 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

12 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

13 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

13 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

19 hours ago