Advertisement
ಕಾರ್ಯಕ್ರಮಗಳು

ಕಬಕ ಪ್ರೌಢ ಶಾಲೆಯಲ್ಲಿ ಅಬ್ಬಕ್ಕ ರಾಣಿ ಗೈಡ್ಸ್ ದಳ ಉದ್ಘಾಟನೆ

Share

ಕಬಕ : ವಿದ್ಯಾರ್ಥಿಗಳು ಶಾಲೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಆತ್ಮವಿಶ್ವಾಸ ಬೆಳೆಸಬೇಕು. ಶಿಸ್ತನ್ನು ಅಳವಡಿಸಿಕೊಂಡು ವಿದ್ಯಾಭ್ಯಾಸ ಮಾಡಿ ಹೆತ್ತವರಿಗೂ ಶಾಲೆಗೂ ಕೀರ್ತಿ ತರಬೇಕು. ಸಾಮಾಜಿಕ ಶಾಂತಿ ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾಲೂ ಇದೆ ಎಂದು ಸಾಮಾಜಿಕ ಮುಖಂಡ ಶಾಲಾ ಎಸ್.ಡಿ.ಎಮ್.ಸಿ ಕಾರ್ಯಾಧ್ಯಕ್ಷ ಪುರುಷೋತ್ತಮ ಮುಂಗ್ಲಿಮನೆ ಹೇಳಿದರು.

ಅವರು ಕಬಕ ಸರಕಾರಿ ಪ್ರೌಢ ಶಾಲೆಯಲ್ಲಿ ದ.ಕ. ಜಿಲ್ಲಾ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಆಶ್ರಯದಲ್ಲಿ ಏರ್ಪಡಿಸಲಾದ ಅಬ್ಬಕ್ಕರಾಣಿ ಗೈಡ್ಸ್ ದಳವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ವಿಶ್ರಾಂತ ಯೋಧ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ತಾರನಾಥ್ ಬೋಳಾರ್ ಮಾತನಾಡಿ ಸೈನಿಕರ ತ್ಯಾಗ ಬಲಿದಾನದಿಂದಾಗಿ ನಾವು ಸುಖ ಶಾಂತಿಯಿಂದ ಬದುಕಬಹುದಾಗಿದೆ. ಸೈನ್ಯದಲಿ ಸೇರುವುದಕ್ಕೆ ಸಾಕಷ್ಟು ಅವಕಾಶಗಳಿವೆ ಎಂದರು.

ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಜಯಾನಂದ ಪೆರಾಜೆ ಅಭ್ಯಾಗತರಾಗಿ ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ದಳದ ಸೇವಾಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶಾಲೆಯಲ್ಲಿ ಗೈಡ್ಸ್ ದಳವನ್ನು ಆರಂಭಿಸಿರುವುದಕ್ಕೆ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.

ಶಾಲಾ ಮುಖ್ಯೋಪಾಧ್ಯಾಯ ಶಫಿಉಲ್ಲಾ ಎಸ್. ಅಧ್ಯಕ್ಷತೆ ವಹಿಸಿ ಗೈಡ್ಸ್ ಸಂಬಂಧಿಸಿದ ಪರಿಕರಗಳನ್ನು ನೀಡಿದರು. ವಿಶ್ರಾಂತ ಯೋಧ ತಾರನಾಥ ಬೋಳಾರ್ ಮತ್ತು ನಿವೃತ್ತ ಶಿಕ್ಷಕ ಜಯಾನಂದ ಪೆರಾಜೆ ಇವರನ್ನು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ವಿಜ್ಞಾನ ಶಿಕ್ಷಕಿ ಇಂದಿರಾ ಕೆ.ಸ್ವಾಗತಿಸಿದರು. ಗೈಡ್ಸ್ ಶಿಕ್ಷಕಿ ಶಾಂತಾ ಪ್ರಾಸ್ತಾವಿಕ ಮಾತುಗಳನ್ನಾಡಿ ಗೈಡ್ಸ್ ದಳದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಶಾನಿಯಾ ನಿರೂಪಿಸಿ, ದೈಹಿಕ ಶಿಕ್ಷಕ ಕೃಷ್ಣಯ್ಯ ಕೆ. ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

8 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

10 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

11 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago