ಸುಬ್ರಹ್ಮಣ್ಯ : ಅಂತರಾಷ್ಟ್ರೀಯ ಕಬಡ್ಡಿ ಆಟಗಾರ ಕುಂದಾಪುರ ಮೂಲದ ರಿಶಾಂತ್ ದೇವಾಡಿಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಆಶ್ಲೇಷ ಪೂಜಾ ಸೇವೆ ನೆರವೇರಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಶಾಲು ಹೊದಿಸಿ ಗೌರವಿಸಿದರು.
ಕುಕ್ಕೆ ದೇವಸ್ಥಾನಕ್ಕೆ ವರ್ಷಕ್ಕೆ ಒಂದು ಭಾರಿ ಭೇಟಿ ನೀಡುವ ಸಂಪ್ರದಾಯ ಬೆಳೆಸಿಕೊಂಡಿದ್ದು. ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ತನಗೆ ಒಳಿತಾಗಿದೆ. ಕಬಡ್ಡಿ ಆಟಗಾರನಾಗಿಯೂ ಉತ್ತಮ ಸಾಧನೆ ತೋರಲು ಸಾಧ್ಯವಾಗಿದೆ ಎದು ರಿಶಾಂತ್ ದೇವಾಡಿಗ ಹೇಳಿದರು.
ಈ ಸಂದರ್ಭ ರಿಶಾಂತ್ ಕುಟುಂಬಸ್ಥರು, ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್, ಶಿಷ್ಟಚಾರ ವಿಭಾಗದ ಪ್ರಮೋದ್ ಉಪಸ್ಥಿತರಿದ್ದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…