ಮೈಸೂರು/ಮಡಿಕೇರಿ: ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಶ್ರೀನಿವಾಸ ಪ್ರಸಾದ್, ವಸತಿ ಸಚಿವ ವಿ.ಸೋಮಣ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಅತಿವೃಷ್ಟಿ ಪರಿಹಾರಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಅಧ್ಯಯನ ತಂಡವೂ ಅಗಮಿಸಿ ವಾಸ್ತವ ಪರಿಶೀಲಿಸಿ ತೆರಳಲಿದೆ. ಶೀಘ್ರದಲ್ಲೇ ಕೇಂದ್ರ ಸರಕಾರದಿಂದ ಪರಿಹಾರ ದೊರೆಯುವ ನಿರೀಕ್ಷೆ ಇದೆ.ರಾಜ್ಯ ಭೇಟಿಗೆ ಆಗಮಿಸಿದ್ದ ಪ್ರಧಾನಿಯವರಿಗೆ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಿಸಲಾಗಿದೆ. ಶೀಘ್ರವೇ ಪರಿಹಾರ ಬಿಡುಗಡೆಯ ನಿರೀಕ್ಷೆಯಲ್ಲಿದ್ದೇವೆ. ರಾಜ್ಯ ಸರಕಾರದಿಂದ ಬೇರೆಲ್ಲಾ ಕೆಲಸಗಳನ್ನು ಬದಿಗೊತ್ತಿ ಅತಿವೃಷ್ಟಿ ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ .ಪರಿಹಾರಕ್ಕೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…