ಕಮಿಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟನೆ

August 25, 2019
11:43 AM

ಗುತ್ತಿಗಾರು: ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲದಲ್ಲಿ ನಡೆಯುತ್ತಿರುವ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು  ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯಅತಿಥಿಗಳಾಗಿದ್ದ ತಾಪಂ ಸದಸ್ಯ ಅಶೋಕ್ ನೆಕ್ರಾಜೆ ಮಾತನಾಡಿ, ಶ್ರೀಕೃಷ್ಣ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶ. ಸಾಮಾಜಿಕವಾಗಿಯೂ ಧಾರ್ಮಿಕವಾಗಿಯೂ ಶ್ರೀಕೃಷ್ಣನ ನಡೆ ಮೆಚ್ಚುವಂತಹದ್ದೇ ಹೀಗಾಗಿ ಆತ ಪರಮಾತ್ಮನಾಗಿ ನಮಗೆಲ್ಲರಿಗೂ ಮಾದರಿಯಾಗಿದ್ದಾನೆ ಎಂದರು. ಯುವ ಸಮುದಾಯವು ಸಂಘಟನಾತ್ಮಕವಾಗಿ ಮಾಡುವ ಇಂತಹ ಕಾರ್ಯಕ್ರಮಕ್ಕೆ ಸದಾ ಬಂಬಲನೀಡುವುದಾಗಿ ತಿಳಿಸಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಶಿಕ್ಷಕ ತೇಜಪ್ಪ ಮಾಸ್ತರ್ ಸಂಪ್ಯಾಡಿ, ಯುವಕರು ನಿರಂತರವಾಗಿ ಸಮಾಜಮುಖಿಯಾಗಿ ತೊಡಗಿಸಿಕೊಂಡಾಗ ಗ್ರಾಮ ಅಭಿವೃದ್ಧಿಯಾಗಲು ಸಾಧ್ಯವಿದೆ. ಧಾರ್ಮಿಕ ಹಾಗೂ ಸಾಮಾಜಿಕವಾಗಿ ಯುವಕರು ಸಕ್ರಿಯವಾಗಿರಬೇಕು ಎಂದು  ಹೇಳಿದರು.

ಸಭಾಧ್ಯಕ್ಷತೆಯನ್ನು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ವಹಿಸಿದ್ದರು.ವೇದಿಕೆಯಲ್ಲಿ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮಂಡಳಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗ್ರಾಪಂ ಮಾಜಿ ಸದಸ್ಯ ರಾಧಾಕೃಷ್ಣ ತುಪ್ಪದಮನೆ ಮೊದಲಾದವರು ಉಪಸ್ಥಿತರಿದ್ದರು.

ಲೋಕೇಶ್ ಕಮಿಲ ಸ್ವಾಗತಿಸಿ ದಾಮೋದರ ಕಾರ್ಯಕ್ರಮ ನಿರೂಪಿಸಿದರು.

ಸಭಾಕಾರ್ಯಕ್ರಮದ ಬಳಿಕ ಮೊಸರು ಕುಡಿಕೆ ಹಾಗೂ ವಿವಿಧ ಸ್ಫರ್ಧೆಗಳು ನಡೆಯುತ್ತಿವೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror