ಗುತ್ತಿಗಾರು: ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲದಲ್ಲಿ ನಡೆಯುತ್ತಿರುವ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯಅತಿಥಿಗಳಾಗಿದ್ದ ತಾಪಂ ಸದಸ್ಯ ಅಶೋಕ್ ನೆಕ್ರಾಜೆ ಮಾತನಾಡಿ, ಶ್ರೀಕೃಷ್ಣ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶ. ಸಾಮಾಜಿಕವಾಗಿಯೂ ಧಾರ್ಮಿಕವಾಗಿಯೂ ಶ್ರೀಕೃಷ್ಣನ ನಡೆ ಮೆಚ್ಚುವಂತಹದ್ದೇ ಹೀಗಾಗಿ ಆತ ಪರಮಾತ್ಮನಾಗಿ ನಮಗೆಲ್ಲರಿಗೂ ಮಾದರಿಯಾಗಿದ್ದಾನೆ ಎಂದರು. ಯುವ ಸಮುದಾಯವು ಸಂಘಟನಾತ್ಮಕವಾಗಿ ಮಾಡುವ ಇಂತಹ ಕಾರ್ಯಕ್ರಮಕ್ಕೆ ಸದಾ ಬಂಬಲನೀಡುವುದಾಗಿ ತಿಳಿಸಿದರು.
ಪ್ರಸ್ತಾವಿಕವಾಗಿ ಮಾತನಾಡಿದ ಶಿಕ್ಷಕ ತೇಜಪ್ಪ ಮಾಸ್ತರ್ ಸಂಪ್ಯಾಡಿ, ಯುವಕರು ನಿರಂತರವಾಗಿ ಸಮಾಜಮುಖಿಯಾಗಿ ತೊಡಗಿಸಿಕೊಂಡಾಗ ಗ್ರಾಮ ಅಭಿವೃದ್ಧಿಯಾಗಲು ಸಾಧ್ಯವಿದೆ. ಧಾರ್ಮಿಕ ಹಾಗೂ ಸಾಮಾಜಿಕವಾಗಿ ಯುವಕರು ಸಕ್ರಿಯವಾಗಿರಬೇಕು ಎಂದು ಹೇಳಿದರು.
ಸಭಾಧ್ಯಕ್ಷತೆಯನ್ನು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ವಹಿಸಿದ್ದರು.ವೇದಿಕೆಯಲ್ಲಿ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮಂಡಳಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗ್ರಾಪಂ ಮಾಜಿ ಸದಸ್ಯ ರಾಧಾಕೃಷ್ಣ ತುಪ್ಪದಮನೆ ಮೊದಲಾದವರು ಉಪಸ್ಥಿತರಿದ್ದರು.
ಲೋಕೇಶ್ ಕಮಿಲ ಸ್ವಾಗತಿಸಿ ದಾಮೋದರ ಕಾರ್ಯಕ್ರಮ ನಿರೂಪಿಸಿದರು.
ಸಭಾಕಾರ್ಯಕ್ರಮದ ಬಳಿಕ ಮೊಸರು ಕುಡಿಕೆ ಹಾಗೂ ವಿವಿಧ ಸ್ಫರ್ಧೆಗಳು ನಡೆಯುತ್ತಿವೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…