ಗುತ್ತಿಗಾರು: ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲದಲ್ಲಿ ನಡೆಯುತ್ತಿರುವ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯಅತಿಥಿಗಳಾಗಿದ್ದ ತಾಪಂ ಸದಸ್ಯ ಅಶೋಕ್ ನೆಕ್ರಾಜೆ ಮಾತನಾಡಿ, ಶ್ರೀಕೃಷ್ಣ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶ. ಸಾಮಾಜಿಕವಾಗಿಯೂ ಧಾರ್ಮಿಕವಾಗಿಯೂ ಶ್ರೀಕೃಷ್ಣನ ನಡೆ ಮೆಚ್ಚುವಂತಹದ್ದೇ ಹೀಗಾಗಿ ಆತ ಪರಮಾತ್ಮನಾಗಿ ನಮಗೆಲ್ಲರಿಗೂ ಮಾದರಿಯಾಗಿದ್ದಾನೆ ಎಂದರು. ಯುವ ಸಮುದಾಯವು ಸಂಘಟನಾತ್ಮಕವಾಗಿ ಮಾಡುವ ಇಂತಹ ಕಾರ್ಯಕ್ರಮಕ್ಕೆ ಸದಾ ಬಂಬಲನೀಡುವುದಾಗಿ ತಿಳಿಸಿದರು.
ಪ್ರಸ್ತಾವಿಕವಾಗಿ ಮಾತನಾಡಿದ ಶಿಕ್ಷಕ ತೇಜಪ್ಪ ಮಾಸ್ತರ್ ಸಂಪ್ಯಾಡಿ, ಯುವಕರು ನಿರಂತರವಾಗಿ ಸಮಾಜಮುಖಿಯಾಗಿ ತೊಡಗಿಸಿಕೊಂಡಾಗ ಗ್ರಾಮ ಅಭಿವೃದ್ಧಿಯಾಗಲು ಸಾಧ್ಯವಿದೆ. ಧಾರ್ಮಿಕ ಹಾಗೂ ಸಾಮಾಜಿಕವಾಗಿ ಯುವಕರು ಸಕ್ರಿಯವಾಗಿರಬೇಕು ಎಂದು ಹೇಳಿದರು.
ಸಭಾಧ್ಯಕ್ಷತೆಯನ್ನು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ವಹಿಸಿದ್ದರು.ವೇದಿಕೆಯಲ್ಲಿ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮಂಡಳಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗ್ರಾಪಂ ಮಾಜಿ ಸದಸ್ಯ ರಾಧಾಕೃಷ್ಣ ತುಪ್ಪದಮನೆ ಮೊದಲಾದವರು ಉಪಸ್ಥಿತರಿದ್ದರು.
ಲೋಕೇಶ್ ಕಮಿಲ ಸ್ವಾಗತಿಸಿ ದಾಮೋದರ ಕಾರ್ಯಕ್ರಮ ನಿರೂಪಿಸಿದರು.
ಸಭಾಕಾರ್ಯಕ್ರಮದ ಬಳಿಕ ಮೊಸರು ಕುಡಿಕೆ ಹಾಗೂ ವಿವಿಧ ಸ್ಫರ್ಧೆಗಳು ನಡೆಯುತ್ತಿವೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…