ಗುತ್ತಿಗಾರು: ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲದಲ್ಲಿ ನಡೆಯುತ್ತಿರುವ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯಅತಿಥಿಗಳಾಗಿದ್ದ ತಾಪಂ ಸದಸ್ಯ ಅಶೋಕ್ ನೆಕ್ರಾಜೆ ಮಾತನಾಡಿ, ಶ್ರೀಕೃಷ್ಣ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶ. ಸಾಮಾಜಿಕವಾಗಿಯೂ ಧಾರ್ಮಿಕವಾಗಿಯೂ ಶ್ರೀಕೃಷ್ಣನ ನಡೆ ಮೆಚ್ಚುವಂತಹದ್ದೇ ಹೀಗಾಗಿ ಆತ ಪರಮಾತ್ಮನಾಗಿ ನಮಗೆಲ್ಲರಿಗೂ ಮಾದರಿಯಾಗಿದ್ದಾನೆ ಎಂದರು. ಯುವ ಸಮುದಾಯವು ಸಂಘಟನಾತ್ಮಕವಾಗಿ ಮಾಡುವ ಇಂತಹ ಕಾರ್ಯಕ್ರಮಕ್ಕೆ ಸದಾ ಬಂಬಲನೀಡುವುದಾಗಿ ತಿಳಿಸಿದರು.
ಪ್ರಸ್ತಾವಿಕವಾಗಿ ಮಾತನಾಡಿದ ಶಿಕ್ಷಕ ತೇಜಪ್ಪ ಮಾಸ್ತರ್ ಸಂಪ್ಯಾಡಿ, ಯುವಕರು ನಿರಂತರವಾಗಿ ಸಮಾಜಮುಖಿಯಾಗಿ ತೊಡಗಿಸಿಕೊಂಡಾಗ ಗ್ರಾಮ ಅಭಿವೃದ್ಧಿಯಾಗಲು ಸಾಧ್ಯವಿದೆ. ಧಾರ್ಮಿಕ ಹಾಗೂ ಸಾಮಾಜಿಕವಾಗಿ ಯುವಕರು ಸಕ್ರಿಯವಾಗಿರಬೇಕು ಎಂದು ಹೇಳಿದರು.
ಸಭಾಧ್ಯಕ್ಷತೆಯನ್ನು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ವಹಿಸಿದ್ದರು.ವೇದಿಕೆಯಲ್ಲಿ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮಂಡಳಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗ್ರಾಪಂ ಮಾಜಿ ಸದಸ್ಯ ರಾಧಾಕೃಷ್ಣ ತುಪ್ಪದಮನೆ ಮೊದಲಾದವರು ಉಪಸ್ಥಿತರಿದ್ದರು.
ಲೋಕೇಶ್ ಕಮಿಲ ಸ್ವಾಗತಿಸಿ ದಾಮೋದರ ಕಾರ್ಯಕ್ರಮ ನಿರೂಪಿಸಿದರು.
ಸಭಾಕಾರ್ಯಕ್ರಮದ ಬಳಿಕ ಮೊಸರು ಕುಡಿಕೆ ಹಾಗೂ ವಿವಿಧ ಸ್ಫರ್ಧೆಗಳು ನಡೆಯುತ್ತಿವೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…