ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವತಿಯಿಂದ ಬೆಳಗಾವಿಯಲ್ಲಿ ನ.18 ರಿಂದ 20ರ ತನಕ ನಡೆದ ರಾಜ್ಯಮಟ್ಟದ ಪ್ರಾಥಮಿಕ ಹಾಗು ಪ್ರೌಢ ಶಾಲಾ ವಿದ್ಯಾರ್ಥಿಗಳ ಕರಾಟೆ ಪಂದ್ಯಾವಳಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಸಂಹಿತಾ ಶರ್ಮ ಪ್ರಾಥಮಿಕ ಶಾಲಾ ಬಾಲಕಿಯರ -46 ಕೆಜಿ ಕುಮಿಟೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ಮುಂದೆ ಮಧ್ಯಪ್ರದೇಶದ ಜಬಲ್ ಪುರದಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಲಿರುವ 65ನೇ ರಾಷ್ಟ್ರೀಯ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ.
ಇವರು ಇನ್ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಮಾರ್ಷಲ್ ಆರ್ಟ್ಸ್-ಐಕೆಎಂಎಸಂಸ್ಥೆಯ ಮುಖ್ಯ ತರಬೇತುದಾರರಾದ ಸೆನ್ಸಾಯಿ ನಿತಿನ್ ಎನ್ ಸುವರ್ಣ ಹಾಗು ತರಬೇತುದಾರರಾದ ಸಂಪತ್ ಕುಮಾರ್ ರವರಿಂದ ತರಬೇತಿಯನ್ನು ಪಡೆಯುತಿದ್ದಾರೆ. ಸಾಲ್ಮರ ನಿವಾಸಿ ರಾಜೇಶ್ ಶರ್ಮ ಹಾಗು ಸೀಮಾ ದಂಪತಿ ಪುತ್ರಿ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…