ಮಂಗಳೂರು: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಉದ್ಭವಿಸಿದ “ಕ್ಯಾರ್” ಚಂಡ ಮಾರುತ ಕರಾವಳಿ ಕಡೆಗೆ ಅಪ್ಪಳಿಸುತ್ತಿದೆ. ಹೀಗಾಗಿ ಇಡೀ ಕರಾವಳಿ ತೀರದಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದ್ದು ಮುಂಬಯಿ, ಗೋವಾ, ಕಾರವಾರ, ಉಡುಪಿ, ಮಂಗಳೂರು ಕರಾವಳಿ ತೀರಕ್ಕೆ ಅಪ್ಪಳಿಸಲಿದೆ. ಹೀಗಾಗಿ ಮುಂದಿನ 24 ಗಂಟೆಗಳಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಕಾರಣದಿಂದ ಕರಾವಳಿ ಪ್ರದೇಶದಲ್ಲಿ ಎಚ್ಚರಿಕೆ ವಹಿಸಲಾಗಿದೆ. ಕ್ಯಾರ್ ಬೆನ್ನಿಗೇ ಇನ್ನೆರಡು 3 ಚಂಡಮಾರುತ ಬೀಳುವ ಸಾಧ್ಯತೆ ಇದೆ. ಸದ್ಯದ ಹವಾಮಾನದ ಪ್ರಕಾರ “ಕ್ಯಾರ್” ಬಳಿಕ “ಮಹಾ” ನಂತರ “ಬುಲ್ ಬುಲ್” ಚಂಡಮಾರುತವೂ ಸಿದ್ಧವಾಗಿದೆ.
ಕರ್ನಾಟಕದಲ್ಲಿ ‘ಕ್ಯಾರ್’ ಚಂಡಮಾರುತ ಅಬ್ಬರಿಸಲಿದೆ. ಮುಂದಿನ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಸಿಲಾಗಿದೆ. ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪಗಳಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಅನೇಕ ಕಡೆ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಆದೇಶಿಸಲಾಗಿದೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ 1077 ಸಂಖ್ಯೆಗೆ ಕರೆ ಮಾಡುವಂತೆ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.
ಇದರ ಬೆನ್ನಿಗೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಳ್ಳುತ್ತಿದ್ದು “ಮಹಾ” ಹೆಸರಿನ ಚಂಡಮಾರುತ ಅ.25 ರ ಹೊತ್ತಿಗೆ ಕಾಣಿಸಲಿದೆ. ಅ.26 ರಂದು ಮತ್ತಷ್ಟು ವಾಯುಭಾರ ಕುಸಿತದೊಂದಿಗೆ ತಮಿಳುನಾಡು ಕರಾವಳಿ ತೀರ, ಪಾಂಡಿಚೇರಿ ಮೊದಲಾದ ಕಡೆಗಳಲ್ಲಿ ಅಪ್ಪಳಿಸಿ ಶ್ರೀಲಂಕಾದಲ್ಲೂ ಕಾಣಿಸಿಕೊಂಡು ಕೇರಳದ ಪ್ರವೇಶಿಸುವ ವೇಳೆ ದುರ್ಬಲವಾಗಲಿದೆ ಎಂದು ಅಂದಾಜಿಸಲಾಗಿದೆ.
ಕ್ಯಾರ್ ಹಾಗೂ ಮಹಾ ಚಂಡಮಾರುತದ ಕಾರಣದಿಂದಾಗಿ ಇನ್ನೊಂದು ಚಂಡಮಾರುತ “ಬುಲ್ ಬುಲ್ ” ಕಾಣಿಸಬಹುದು ಎಂದು ಅಂದಾಜಿಸಲಾಗಿದೆ ಇದು ಅ.27 ರ ಹೊತ್ತಿಗೆ ಫಿಲಿಫೈನ್ ನಲ್ಲಿ ಅಪ್ಪಳಿಸಿ ನಂತರ ಎರಡು ದಿನಗಳಲ್ಲಿ ದಕ್ಷಿಣ ಚೀನಾದ ಸಮುದ್ರದಲ್ಲಿ ಕಾಣಿಸಿಕೊಂಡು ಭಾರತದಲ್ಲೂ ಕಾಣಿಸಬಹುದು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…