Advertisement
MIRROR FOCUS

ಕರಾವಳಿ ಜಿಲ್ಲೆಯ ಸೌಹಾರ್ದ ಮನಸ್ಸುಗಳು

Share

ಮಂಗಳೂರು: ಈ ಸುದ್ದಿ ನಮಗೆಲ್ಲರಿಗೂ ಸಂಬಂಧಿಸಿದ್ದು. ಇಂತಹ ಮನಸ್ಸುಗಳು ಹೆಚ್ಚಾಗಬೇಕು. ಕಾರಣ ಏಕೆ ಗೊತ್ತಾ ?

Advertisement
Advertisement

ಕಳೆದ ಕೆಲವು ಸಮಯಗಳ ಹಿಂದೆ ಮಂಗಳೂರು ಎಂದಾಕ್ಷಣ ಎಲ್ಲರೂ ನೋಡುವ ದೃಷ್ಠಿ ಬೇರೆಯೇ ಇತ್ತು. ಉದ್ದಿಮೆಗಳೂ ದೂರ ಹೋಗುತ್ತಿದ್ದವು. ಕಾರಣ ” ಮಂಗಳೂರು ಕೋಮು ಸಂಘರ್ಷದ ಊರು” ಅಂತ ಬೊಬ್ಬೆ ಹೊಡೆಯುತ್ತಿದ್ದರು.

ಆದರೆ ಇಲ್ಲಿಯ ಮನಸ್ಸುಗಳು ಹಾಗಿಲ್ಲ. ಕೆಲವೇ ಕೆಲವು ಮಂದಿಯ ಮಾತುಗಳು ರಾಜ್ಯವನ್ನು, ಜಿಲ್ಲೆಯನ್ನು ಪ್ರತಿನಿಧಿಸುತ್ತದೆ. ಆದರೆ ವಾಸ್ತವ ಸ್ಥಿತಿ ಹಾಗಿಲ್ಲ. ಅದಕ್ಕೊಂದು ಉದಾಹರಣೆ ಬಂಟ್ವಾಳ ತಾಲೂಕಿನ ಮುಡಿಪು ಸಮೀಪದ ಸಂಬಾರ ತೋಟ ಎಂಬಲ್ಲಿ ನಡೆದ ಹಿಂದೂ ಯುವಕರ  ಮದುವೆಯ ಕಾರ್ಯಕ್ರಮ. ಈ ಮದುವೆಯಲ್ಲಿ  ಹಿಂದೂ ಯುವಕ ತನ್ನ ಮದುವೆಯ ಔತಣಕೂಟದ ಸಲುವಾಗಿ, ಮಸೀದಿಯಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ. ಆ ಯುವಕನ ಹೆಸರು ಶೈಲೇಶ್.
ಶೈಲೇಶ್  ಇರಾ ವ್ಯಾಪ್ತಿಯಲ್ಲಿ ನೆಲೆಸಿ,, ತನ್ನ ಉದ್ಯೋಗ ವೃತ್ತಿಯನ್ನು ಮುಡಿಪು ಪರಿಸರದ ಸಂಬಾರ ತೋಟದಲ್ಲಿ “ಅಮ್ಮ ಎಂಟರ್ಪ್ರೈಸಸ್ “ಎಂಬ ಎಲೆಕ್ಟ್ರಾನಿಕ್ಸ್ ಸಾಮಗ್ರಿಗಳನ್ನು ಮಾರಾಟ ಮಾಡುವ ತನ್ನದೇ ಆದ ಸ್ವಂತ ಕೇಂದ್ರದಲ್ಲಿ ಉದ್ಯೋಗವನ್ನು ಮಾಡುತ್ತಿದ್ದಾರೆ. ಸರ್ವಧರ್ಮಿಯರು ಕೇವಲ ವ್ಯಾಪಾರಕ್ಕೆ ಮಾತ್ರ ಸೀಮಿತ ಅಲ್ಲ, ನನ್ನ ಜೀವನದ ಎಲ್ಲ ಕಷ್ಟ ಸುಖಗಳಿಗೂ ಸೀಮಿತ ಎನ್ನುವ ನಿಟ್ಟಿನಲ್ಲಿ, ಶೈಲೇಶ್ ಅವರು ಮದುವೆಯ ಕಾರ್ಯಕ್ರಮದ ಪ್ರಯುಕ್ತ  ಸುತ್ತಮುತ್ತಲಿನ ಎಲ್ಲಾ ಮುಸಲ್ಮಾನ ಬಂಧುಗಳಿಗೆ ರಾತ್ರಿಯ ಔತಣಕೂಟಕ್ಕೆ ಕರೆದರು. ಅದಕ್ಕಾಗಿಯೇ ನೂರಾನಿಯ ಜುಮಾ ಮಸೀದಿ ಸಂಬಾರ ತೋಟದಲ್ಲಿ ಇಫ್ತಾರ್ ಕೂಟ ಏರ್ಪಡಿಸಿ ಸೌಹಾರ್ದತೆ ಮೆರೆದರು.  ಇದಿಷ್ಟೇ ಅಲ್ಲ, ಇತ್ತೀಚೆಗೆ ಕನ್ಯಾನ ಬಳಿಯಲ್ಲಿ  ನಡೆದ ವಿವಾಹ ಸಮಾರಂಭದಲಲ್ಲಿ ರಾಧಾ ಎಂಬವರ ವಿವಾಹ ಕಾರ್ಯಕ್ರಮದಲ್ಲೂ ಇಫ್ತಾರ್ ಕೂಟ ನಡೆಯಿತು.

ಇಂತಹ ಮನಸ್ಸುಗಳು ಹೆಚ್ಚಾಗುವುದರ ಜೊತೆಗೆ ಹಿಂದೂ-ಮುಸ್ಲಿಂ  ಎರಡೂ ಕಡೆಗಳಿಂದಲೂ ಸೌಹಾರ್ದೆತೆಯ ಚಿಂತನೆ ಎಲ್ಲೆಡೆ ನಡೆಯಲಿದೆ. ಮಂಗಳೂರು ಎಂದೆಂದಿಗೂ ಶಾಂತವಾಗಿರಲಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

1 hour ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

2 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

12 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

12 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

12 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

12 hours ago