Advertisement
MIRROR FOCUS

ಕರಾವಳಿ ಜಿಲ್ಲೆಯ ಸೌಹಾರ್ದ ಮನಸ್ಸುಗಳು

Share

ಮಂಗಳೂರು: ಈ ಸುದ್ದಿ ನಮಗೆಲ್ಲರಿಗೂ ಸಂಬಂಧಿಸಿದ್ದು. ಇಂತಹ ಮನಸ್ಸುಗಳು ಹೆಚ್ಚಾಗಬೇಕು. ಕಾರಣ ಏಕೆ ಗೊತ್ತಾ ?

ಕಳೆದ ಕೆಲವು ಸಮಯಗಳ ಹಿಂದೆ ಮಂಗಳೂರು ಎಂದಾಕ್ಷಣ ಎಲ್ಲರೂ ನೋಡುವ ದೃಷ್ಠಿ ಬೇರೆಯೇ ಇತ್ತು. ಉದ್ದಿಮೆಗಳೂ ದೂರ ಹೋಗುತ್ತಿದ್ದವು. ಕಾರಣ ” ಮಂಗಳೂರು ಕೋಮು ಸಂಘರ್ಷದ ಊರು” ಅಂತ ಬೊಬ್ಬೆ ಹೊಡೆಯುತ್ತಿದ್ದರು.

ಆದರೆ ಇಲ್ಲಿಯ ಮನಸ್ಸುಗಳು ಹಾಗಿಲ್ಲ. ಕೆಲವೇ ಕೆಲವು ಮಂದಿಯ ಮಾತುಗಳು ರಾಜ್ಯವನ್ನು, ಜಿಲ್ಲೆಯನ್ನು ಪ್ರತಿನಿಧಿಸುತ್ತದೆ. ಆದರೆ ವಾಸ್ತವ ಸ್ಥಿತಿ ಹಾಗಿಲ್ಲ. ಅದಕ್ಕೊಂದು ಉದಾಹರಣೆ ಬಂಟ್ವಾಳ ತಾಲೂಕಿನ ಮುಡಿಪು ಸಮೀಪದ ಸಂಬಾರ ತೋಟ ಎಂಬಲ್ಲಿ ನಡೆದ ಹಿಂದೂ ಯುವಕರ  ಮದುವೆಯ ಕಾರ್ಯಕ್ರಮ. ಈ ಮದುವೆಯಲ್ಲಿ  ಹಿಂದೂ ಯುವಕ ತನ್ನ ಮದುವೆಯ ಔತಣಕೂಟದ ಸಲುವಾಗಿ, ಮಸೀದಿಯಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ. ಆ ಯುವಕನ ಹೆಸರು ಶೈಲೇಶ್.
ಶೈಲೇಶ್  ಇರಾ ವ್ಯಾಪ್ತಿಯಲ್ಲಿ ನೆಲೆಸಿ,, ತನ್ನ ಉದ್ಯೋಗ ವೃತ್ತಿಯನ್ನು ಮುಡಿಪು ಪರಿಸರದ ಸಂಬಾರ ತೋಟದಲ್ಲಿ “ಅಮ್ಮ ಎಂಟರ್ಪ್ರೈಸಸ್ “ಎಂಬ ಎಲೆಕ್ಟ್ರಾನಿಕ್ಸ್ ಸಾಮಗ್ರಿಗಳನ್ನು ಮಾರಾಟ ಮಾಡುವ ತನ್ನದೇ ಆದ ಸ್ವಂತ ಕೇಂದ್ರದಲ್ಲಿ ಉದ್ಯೋಗವನ್ನು ಮಾಡುತ್ತಿದ್ದಾರೆ. ಸರ್ವಧರ್ಮಿಯರು ಕೇವಲ ವ್ಯಾಪಾರಕ್ಕೆ ಮಾತ್ರ ಸೀಮಿತ ಅಲ್ಲ, ನನ್ನ ಜೀವನದ ಎಲ್ಲ ಕಷ್ಟ ಸುಖಗಳಿಗೂ ಸೀಮಿತ ಎನ್ನುವ ನಿಟ್ಟಿನಲ್ಲಿ, ಶೈಲೇಶ್ ಅವರು ಮದುವೆಯ ಕಾರ್ಯಕ್ರಮದ ಪ್ರಯುಕ್ತ  ಸುತ್ತಮುತ್ತಲಿನ ಎಲ್ಲಾ ಮುಸಲ್ಮಾನ ಬಂಧುಗಳಿಗೆ ರಾತ್ರಿಯ ಔತಣಕೂಟಕ್ಕೆ ಕರೆದರು. ಅದಕ್ಕಾಗಿಯೇ ನೂರಾನಿಯ ಜುಮಾ ಮಸೀದಿ ಸಂಬಾರ ತೋಟದಲ್ಲಿ ಇಫ್ತಾರ್ ಕೂಟ ಏರ್ಪಡಿಸಿ ಸೌಹಾರ್ದತೆ ಮೆರೆದರು.  ಇದಿಷ್ಟೇ ಅಲ್ಲ, ಇತ್ತೀಚೆಗೆ ಕನ್ಯಾನ ಬಳಿಯಲ್ಲಿ  ನಡೆದ ವಿವಾಹ ಸಮಾರಂಭದಲಲ್ಲಿ ರಾಧಾ ಎಂಬವರ ವಿವಾಹ ಕಾರ್ಯಕ್ರಮದಲ್ಲೂ ಇಫ್ತಾರ್ ಕೂಟ ನಡೆಯಿತು.

ಇಂತಹ ಮನಸ್ಸುಗಳು ಹೆಚ್ಚಾಗುವುದರ ಜೊತೆಗೆ ಹಿಂದೂ-ಮುಸ್ಲಿಂ  ಎರಡೂ ಕಡೆಗಳಿಂದಲೂ ಸೌಹಾರ್ದೆತೆಯ ಚಿಂತನೆ ಎಲ್ಲೆಡೆ ನಡೆಯಲಿದೆ. ಮಂಗಳೂರು ಎಂದೆಂದಿಗೂ ಶಾಂತವಾಗಿರಲಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

2 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

16 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

16 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

23 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago