ಮಂಗಳೂರು/ಸುಳ್ಯ: ಕರಾವಳಿ ತೀರ, ಗೋವಾ ಹಾಗೂ ಕೊಂಕಣ ಪ್ರದೇಶದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಈ ಮಳೆಯಾಗಲಿದೆ. ಹೀಗಾಗಿ ಮುಂದಿನ 48 ಗಂಟೆಗಳಲ್ಲಿ “ಕ್ಯಾರ್” ಚಂಡಮಾರುವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ. ಶುಕ್ರವಾರ ಹಾಗೂ ಶನಿವಾರ ಭಾರೀ ಮಳೆಯ ಸೂಚನೆ ಇದೆ. ನಾಳೆಯಿಂದಲೇ ಅಂದರೆ ಅ.24 ರಿಂದಲೇ ಮಳೆ ಹೆಚ್ಚಾಗುವ ಲಕ್ಷಣಗಳು ಕಾಣಿಸಿದೆ.
ಕಳೆದ ಕೆಲವು ದಿನಗಳಿಂದ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಕಂಡುಬಂದಿದೆ. ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಂಡುಬಂದಿರುವ ಕುಸಿತವು ಕರಾವಳಿ ಕಡೆಗೆ ಆಗಮಿಸುತ್ತಿದೆ.ಇದರಿಂದ ಗೋವಾ, ಕೊಂಕಣ ಮತ್ತು ಕರ್ನಾಟಕದ ಮೂರು ಕರಾವಳಿ ಜಿಲ್ಲೆಗಳಿಗೆ ಆತಂಕವಿದೆ. “ಕ್ಯಾರ್” ಚಂಡಮಾರುತವಾಗಿ ಅಪ್ಪಳಿಸಿದರೆ ಭಾರೀ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರತ್ನಾಗಿರಿ, ಗೋವಾ, ಕಾರವಾರ, ಮಂಗಳೂರು , ಉಡುಪಿ ಮುಂತಾದ ನಗರಗಳಿಗೆ ಅಪಾಯವಿದೆ. ಮುಂಬೈಯಲ್ಲಿ ಹೆಚ್ಚಿನ ಮಳೆಯೂ ಇರಬಹುದು.
ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…
ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ…
ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…