ಮಂಗಳೂರು/ಸುಳ್ಯ: ಕರಾವಳಿ ತೀರ, ಗೋವಾ ಹಾಗೂ ಕೊಂಕಣ ಪ್ರದೇಶದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಈ ಮಳೆಯಾಗಲಿದೆ. ಹೀಗಾಗಿ ಮುಂದಿನ 48 ಗಂಟೆಗಳಲ್ಲಿ “ಕ್ಯಾರ್” ಚಂಡಮಾರುವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ. ಶುಕ್ರವಾರ ಹಾಗೂ ಶನಿವಾರ ಭಾರೀ ಮಳೆಯ ಸೂಚನೆ ಇದೆ. ನಾಳೆಯಿಂದಲೇ ಅಂದರೆ ಅ.24 ರಿಂದಲೇ ಮಳೆ ಹೆಚ್ಚಾಗುವ ಲಕ್ಷಣಗಳು ಕಾಣಿಸಿದೆ.
ಕಳೆದ ಕೆಲವು ದಿನಗಳಿಂದ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಕಂಡುಬಂದಿದೆ. ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಂಡುಬಂದಿರುವ ಕುಸಿತವು ಕರಾವಳಿ ಕಡೆಗೆ ಆಗಮಿಸುತ್ತಿದೆ.ಇದರಿಂದ ಗೋವಾ, ಕೊಂಕಣ ಮತ್ತು ಕರ್ನಾಟಕದ ಮೂರು ಕರಾವಳಿ ಜಿಲ್ಲೆಗಳಿಗೆ ಆತಂಕವಿದೆ. “ಕ್ಯಾರ್” ಚಂಡಮಾರುತವಾಗಿ ಅಪ್ಪಳಿಸಿದರೆ ಭಾರೀ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರತ್ನಾಗಿರಿ, ಗೋವಾ, ಕಾರವಾರ, ಮಂಗಳೂರು , ಉಡುಪಿ ಮುಂತಾದ ನಗರಗಳಿಗೆ ಅಪಾಯವಿದೆ. ಮುಂಬೈಯಲ್ಲಿ ಹೆಚ್ಚಿನ ಮಳೆಯೂ ಇರಬಹುದು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…