ಮಂಗಳೂರು/ಸುಳ್ಯ: ಕರಾವಳಿ ತೀರ, ಗೋವಾ ಹಾಗೂ ಕೊಂಕಣ ಪ್ರದೇಶದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಈ ಮಳೆಯಾಗಲಿದೆ. ಹೀಗಾಗಿ ಮುಂದಿನ 48 ಗಂಟೆಗಳಲ್ಲಿ “ಕ್ಯಾರ್” ಚಂಡಮಾರುವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ. ಶುಕ್ರವಾರ ಹಾಗೂ ಶನಿವಾರ ಭಾರೀ ಮಳೆಯ ಸೂಚನೆ ಇದೆ. ನಾಳೆಯಿಂದಲೇ ಅಂದರೆ ಅ.24 ರಿಂದಲೇ ಮಳೆ ಹೆಚ್ಚಾಗುವ ಲಕ್ಷಣಗಳು ಕಾಣಿಸಿದೆ.
ಕಳೆದ ಕೆಲವು ದಿನಗಳಿಂದ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಕಂಡುಬಂದಿದೆ. ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಂಡುಬಂದಿರುವ ಕುಸಿತವು ಕರಾವಳಿ ಕಡೆಗೆ ಆಗಮಿಸುತ್ತಿದೆ.ಇದರಿಂದ ಗೋವಾ, ಕೊಂಕಣ ಮತ್ತು ಕರ್ನಾಟಕದ ಮೂರು ಕರಾವಳಿ ಜಿಲ್ಲೆಗಳಿಗೆ ಆತಂಕವಿದೆ. “ಕ್ಯಾರ್” ಚಂಡಮಾರುತವಾಗಿ ಅಪ್ಪಳಿಸಿದರೆ ಭಾರೀ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರತ್ನಾಗಿರಿ, ಗೋವಾ, ಕಾರವಾರ, ಮಂಗಳೂರು , ಉಡುಪಿ ಮುಂತಾದ ನಗರಗಳಿಗೆ ಅಪಾಯವಿದೆ. ಮುಂಬೈಯಲ್ಲಿ ಹೆಚ್ಚಿನ ಮಳೆಯೂ ಇರಬಹುದು.
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…