ಮಂಗಳೂರು/ಸುಳ್ಯ: ಕರಾವಳಿ ತೀರ, ಗೋವಾ ಹಾಗೂ ಕೊಂಕಣ ಪ್ರದೇಶದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಈ ಮಳೆಯಾಗಲಿದೆ. ಹೀಗಾಗಿ ಮುಂದಿನ 48 ಗಂಟೆಗಳಲ್ಲಿ “ಕ್ಯಾರ್” ಚಂಡಮಾರುವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ. ಶುಕ್ರವಾರ ಹಾಗೂ ಶನಿವಾರ ಭಾರೀ ಮಳೆಯ ಸೂಚನೆ ಇದೆ. ನಾಳೆಯಿಂದಲೇ ಅಂದರೆ ಅ.24 ರಿಂದಲೇ ಮಳೆ ಹೆಚ್ಚಾಗುವ ಲಕ್ಷಣಗಳು ಕಾಣಿಸಿದೆ.
ಕಳೆದ ಕೆಲವು ದಿನಗಳಿಂದ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಕಂಡುಬಂದಿದೆ. ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಂಡುಬಂದಿರುವ ಕುಸಿತವು ಕರಾವಳಿ ಕಡೆಗೆ ಆಗಮಿಸುತ್ತಿದೆ.ಇದರಿಂದ ಗೋವಾ, ಕೊಂಕಣ ಮತ್ತು ಕರ್ನಾಟಕದ ಮೂರು ಕರಾವಳಿ ಜಿಲ್ಲೆಗಳಿಗೆ ಆತಂಕವಿದೆ. “ಕ್ಯಾರ್” ಚಂಡಮಾರುತವಾಗಿ ಅಪ್ಪಳಿಸಿದರೆ ಭಾರೀ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರತ್ನಾಗಿರಿ, ಗೋವಾ, ಕಾರವಾರ, ಮಂಗಳೂರು , ಉಡುಪಿ ಮುಂತಾದ ನಗರಗಳಿಗೆ ಅಪಾಯವಿದೆ. ಮುಂಬೈಯಲ್ಲಿ ಹೆಚ್ಚಿನ ಮಳೆಯೂ ಇರಬಹುದು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…