ಮಂಗಳೂರು/ಸುಳ್ಯ: ಕರಾವಳಿ ತೀರ, ಗೋವಾ ಹಾಗೂ ಕೊಂಕಣ ಪ್ರದೇಶದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಈ ಮಳೆಯಾಗಲಿದೆ. ಹೀಗಾಗಿ ಮುಂದಿನ 48 ಗಂಟೆಗಳಲ್ಲಿ “ಕ್ಯಾರ್” ಚಂಡಮಾರುವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ. ಶುಕ್ರವಾರ ಹಾಗೂ ಶನಿವಾರ ಭಾರೀ ಮಳೆಯ ಸೂಚನೆ ಇದೆ. ನಾಳೆಯಿಂದಲೇ ಅಂದರೆ ಅ.24 ರಿಂದಲೇ ಮಳೆ ಹೆಚ್ಚಾಗುವ ಲಕ್ಷಣಗಳು ಕಾಣಿಸಿದೆ.
ಕಳೆದ ಕೆಲವು ದಿನಗಳಿಂದ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಕಂಡುಬಂದಿದೆ. ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಂಡುಬಂದಿರುವ ಕುಸಿತವು ಕರಾವಳಿ ಕಡೆಗೆ ಆಗಮಿಸುತ್ತಿದೆ.ಇದರಿಂದ ಗೋವಾ, ಕೊಂಕಣ ಮತ್ತು ಕರ್ನಾಟಕದ ಮೂರು ಕರಾವಳಿ ಜಿಲ್ಲೆಗಳಿಗೆ ಆತಂಕವಿದೆ. “ಕ್ಯಾರ್” ಚಂಡಮಾರುತವಾಗಿ ಅಪ್ಪಳಿಸಿದರೆ ಭಾರೀ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರತ್ನಾಗಿರಿ, ಗೋವಾ, ಕಾರವಾರ, ಮಂಗಳೂರು , ಉಡುಪಿ ಮುಂತಾದ ನಗರಗಳಿಗೆ ಅಪಾಯವಿದೆ. ಮುಂಬೈಯಲ್ಲಿ ಹೆಚ್ಚಿನ ಮಳೆಯೂ ಇರಬಹುದು.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…