ಮಂಗಳೂರು: ಅರಬೀ ಸಮುದ್ರದಲ್ಲಿ ಮತ್ತೆ ಮತ್ತೆ ಚಂಡಮಾರುತ ಸುಳಿ ಹೆಚ್ಚಾಗಿದೆ. ಇದೀಗ ಕ್ಯಾರ್ ಚಂಡಮಾರುತ ತಣ್ಣಗಾಗುವ ವೇಳೆಗೆ “ಮಹಾ” ಚಂಡಮಾರುತ ಅಬ್ಬರಿಸುತ್ತಿದೆ. ಸದ್ಯ ಲಕ್ಷದ್ವೀಪ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದಾದ್ಯಂತ ಚಲಿಸುತ್ತಿದೆ ಚಂಡಮಾರುತ ಚಲಿಸುತ್ತಿದೆ.
ಹವಾಮಾನ ತಜ್ಞರ ಪ್ರಕಾರ, ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಕ್ಯಾರ್ ಚಂಡಮಾರುತಕ್ಕಿಂತಲೂ ಮಹಾ ಚಂಡಮಾರುತ ಪ್ರಭಾವ ಬೀರಲಿದೆ. ಕರಾವಳಿ ಪ್ರದೇಶ ಹಾಗೂ ಒಳನಾಡು ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಸದ್ಯ ಲಕ್ಷದ್ವೀಪ ಮತ್ತು ಪಕ್ಕದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕೇಂದ್ರೀಕೃತವಾಗಿದೆ. ಮುಂದೆ ಶುಕ್ರವಾರದ ಹೊತ್ತಿಗೆ, ಮಹಾ ಚಂಡಮಾರುತವು ಪ್ರಭಾವ ಹೆಚ್ಚಿಸುತ್ತಾ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸಹಿತ ವಿವಿದೆಡೆ ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಮೀನುಗಾರರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…